ಬರೆಯದ ಕವಿತೆಗಳು

ಈ ಬಾರಿಯ ತಿರುವುಗಳಾ ಬಯಲಿನ ಹರಹುಗ-
ಳೀ ಹುಡುಗಿಯ ಹುಬ್ಬುಗಳಾ ಸಂಜೆಯ ಮಬ್ಬುಗ-
ಳಷ್ಟೆತ್ತರ ಬೆಟ್ವಗಳೀ ತೀರದ ತಗ್ಗುಗ-
ಳಿನ್ನಿಲ್ಲ ಸಂಜೆಗಳು

ಮತ್ತೀ ಬೆಳಕಿನ ಸುತ್ತಲ ಬೆತ್ತಲು
ಆ ಕಣಿವೆಯ ಕೆಳಗಿನ ಕತ್ತಲು
ಯಾವುದೊ ಕೋಟೆಯ ಸುತ್ತಲು
ಇನ್ನಾವುದೊ ಪ್ರತಿಮೆಯ ಕೆತ್ತಲು

ಯಾರಿಗು ಕೇಳದ ಧ್ವನಿಗಳ
ಯಾರಿಗು ಹೇಳದ ಭಯಗಳ
ಪ್ರೀತಿಗಳ-ಯಾರಿಗು ತಲುಪದ
ಮಾತಿಗು ಬರದ

ನನಗನಿಸಿತ್ತು
ಈ ಕ್ಷಣಗಳ ಹಿಡಿಯುವೆ
ನುಡಿಯೊಳಗಾರೂ ನುಡಿಯದ ತರ
ಪಡೆಯುವೆ-ಆದರೆ

ಓ ದೇವರೆ!
ಈ ಮಗ್ಗುಲ ಮೈಬಿಸಿ
ನೆಲ ಜಲ ಉಸಿರಾಟದ ಹೋರಾಟದ ಧಗೆ
ಬದುಕಿನ ಹಸಿ ಹಸಿ

ಕೇವಲ ಖುಷಿ
ಹಿಡಿಯಲಿ ಹೇಗೆ ?
ಸಂತಯಲಿದ್ದೇ ಖುಷಿಯಾಗುವ ಬಗೆ
ತಿಳಿಯಲಿ ಹೇಗೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪತ್ರ ೩
Next post ಗೌರಿಯಾಕಳು ಮತ್ತು ನಾನು

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

cheap jordans|wholesale air max|wholesale jordans|wholesale jewelry|wholesale jerseys