ಸೂರ್ಯನಲ್ಲಿ ಇನ್ನೊಮ್ಮೆ

ರಾ ಎಂಬುದಾಗಿತ್ತು ನಿನ್ನ ಹೆಸರು
ಹಲವು ಕಾಲದ ತನಕ ನೈಲ್ ನದಿಯ
ಆಚೀಚೆಗೆ ನೀನೊಬ್ಬನೇ ದೇವರು

ಹೊಲಗದ್ದೆ ನಿನ್ನ ದಿನದಿನದ ಉದಯ
ಅಸ್ತಮಾನಗಳಲ್ಲಿ ಅಗಿ ಫಲವತ್ತು
ತುಂಬಿದ ಕಣಜ ನಿನ್ನ ಅಪಾರ ದಯ

ನದಿನೀರು ಕೂಡ ಹಾಗೆಯೇ ಹರಿದಿತ್ತು
ಅರಿತಿದ್ದೆವು ನಾವದರ ಆಳ ಅಗಲ
ಇಳಿದ ನದಿ ಮತ್ತೆ ತುಂಬುವ ಹೊತ್ತು

ಅರಿಯದೆ ಎಂದು ಮರೆತವು ನಮ್ಮ ಮೂಲ?
ಅದು ಎಲ್ಲವನ್ನೂ ಮರೆಸುವ ಸಾರ್ವ-
ಭೌಮ ಫಾರೋಗಳಾಳಿದ ಕಾಲ

ಏರಿ ತಲೆಯೊಳಗೆ ಬೇಡದ ಗರ್ವ
ಹೊಸ ದೇವರುಗಳಲ್ಲಿ ಇಟ್ವೆವು ಭಕ್ತಿ
ಕಳೆದು ಹೋಯಿತು ಒಂದು ಪ್ರಕ್ಷುಬ ಪರ್ವ-

ಪ್ರಾರ್ಥನೆಗಷ್ಟೆ ದೊರೆಯುವುದಾದರೆ ಮುಕ್ತಿ
ರಾ! ಹಿಡಿದುಕೊ ಈ ಒಳಹೊರಗಿನ ಭುಗಿಲು
ಸುಡದಿರಲಿ ಕಾಪಾಡಬೇಕಾದ ಶಕ್ತಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸತ್ಯಾಗ್ರಹಗಳು
Next post ಗೋಡೆ

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

cheap jordans|wholesale air max|wholesale jordans|wholesale jewelry|wholesale jerseys