ಭಯೋತ್ಪಾದಕರು

ತಲೆಗೂದಲು ಕೆದರಿರುವುದು
ಗಡ್ಡ ಹೇರಳ ಬೆಳೆದಿರುವುದು
ಕಣ್ಣು ಆಳಕ್ಕೆ ಇಳಿದಿರುವುದು
ಜೇಬಿನಲ್ಲಿ ಬಾಂಬಿರುವುದು

ಮಂದಿಯ ಹಿಂದೆಯು ಇರುವರು
ಮಂದಿಯ ಮುಂದೆಯು ಇರುವರು
ಮಂದಿಯ ನಡುವೆಯ ಇರುವರು
ಯಾರಿಗೂ ಕಾಣದೆ ಇರುವರು

ಹಿಮಾಲಯದ ಮೇಲೆ ಹಿಮ ಬೀಳುವುದು
ಮನೆಯಂಗಳದ ಮೇಲೆ ಮಳೆ ಬೀಳುವುದು
ಕಾಡಿನ ಮೇಲೆ ಬೆಂಕಿ ಬೀಳುವುದು
ನಿದ್ರಿಸಿದವರಿಗೆ ನಿದ್ದೆ ಬೀಳುವುದು

ಒಬ್ಬಾನೊಬ್ಬ ರಾಜ
ಕನಸೊಂದ ಕಂಡ
ಪೇಪರ್‌ವೈಟಿನ ಬದಲಿಗೆ ಇತ್ತು
ಮೇಜಿನ ಮೇಲವನ ರುಂಡ

ಕೂಡಲೆ ಎದ್ದು ಅಪ್ಪಣೆಮಾಡಿದ
ಪೇಪರ್ ವೈಟುಗಳಿನ್ನು ನಿಷಿದ್ಧ
ಎಲ್ಲವನೂ ಹುಡುಕಿ ತೆಗೆಸಿ
ಸಮುದ್ರದಲ್ಲಿ ಮುಳುಗಿಸಿದ

ಆದರೇನು ಭಯೋತ್ಪಾದಕರು
ಬೇರೆ ಕನಸ ಕಳಿಸಿದರು
ತುಂಡರಿಸಿದ ಅವನ ಕೈಗಳು
ಆದವು ರೇಲ್ವೆ ಸಿಗ್ನಲುಗಳು

ಮಸಿಯ ಬದಲಿಗೆ ನೆತ್ತರು
ಉಪ್ಪಿನಂತೆ ಬೆವರು!
ಕಣ್ಣು ತಾಳೆಹಣ್ಣುಗಳು
ಎದೆಯೊಳಗೆ ಇದ್ದಿಲು!

ಏಳಲಾರ ಕನಸು ಹರಿದು
ಎದ್ದರೆ ಗತಿಯೇನು ?
ಹಾಗೆ ಸುಮ್ಮನೆ ಮಲಗಿರುವನು
ಯುಗ ಮುಗಿಯುವುದ ಕಾದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಊರ ಜನ ನನ್ನನ್ನು ಹುಚ್ಚನೆಂದು ಕರೆದಿದ್ದರು
Next post ಹಡೆದವ್ವನ ನೆನಪು

ಸಣ್ಣ ಕತೆ

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

cheap jordans|wholesale air max|wholesale jordans|wholesale jewelry|wholesale jerseys