ಮನಸ್ಸಿದ್ದಲ್ಲಿ ಮರುಭೂಮಿ

ಕೆಲವೊಮ್ಮೆ ನಾನು ಭಾವಿಸುವೆನು
ಮರುಭೂಮಿಯೊಂದನು ಅದರೊಳಗೆ
ಸರೋವರವೊಂದ ನಿರ್ಮಿಸುವೆನು
ನೋಡಿದರೆ ನೀರು ಕನ್ನಡಿಯಷ್ಟು ನಿರಾಳ
ಅಲ್ಲಿ ಆಕಾಶಕ್ಕೆ ಎತ್ತರದಷ್ಟೆ ಆಳ

ಆಚೀಚೆ ಕಣ್ಣಳತೆಯುದ್ದಕೂ ಬರಿ ಮಳಲು
ದಿನದಿನವು ಬದಲಾಗುತ್ತ ನಿನ್ನೆ ನೋಡಿದ್ದು
ಇಂದು ಕಾಣಿಸದೆ ಇಂದಿರದಲ್ಲಿ ನಾಳೆ
ಮೂಡುತ್ತ-ಇಷ್ಟೊಂದು ಮಳಲ ಹಾದು
ಅಸಾಧ್ಯ ಯಾರೂ ನನ್ನ ಹುಡುಕುವುದು

ಹೀಗೆಂದು ಡೇರೆಯನೂರಿ ಹೊರಗಿಳಿದು
ತಾಳೆಬಾಳೆಗಳ ನಡುವೆ ಓಡಾಡಿ ಅಹಹಾ ಎಂದು
ರಾತ್ರಿಯಾಗುತ್ತಲೇ ಬೆಂಕಿ ಕಾಯಿಸುತ ಕುಳಿತರೆ
ಎಲಲ! ಕುಳಿತಿದ್ದಾರೆ ಅನೇಕ ಮಂದಿ ಸುತ್ತ
ನನಗಿಂತ ಹಿಂದೆಯೇ ಬಂದವರು ಇತ್ತ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಮರ ಕಲಾವಿದ ಸಪ್ದರ
Next post ಬದುಕು ಚಿಗುರುವುದೆಂದರೆ

ಸಣ್ಣ ಕತೆ

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

cheap jordans|wholesale air max|wholesale jordans|wholesale jewelry|wholesale jerseys