ಕವಿಯ ಅವಸ್ಥಾಭೇದಗಳು

ಮೊಟ್ಟೆಯಾಗಿ ಮೊದಲಿನವಸ್ಥೆ
ಆಗ ಪ್ರೇಮಗೀತೆಗಳಲ್ಲಿ
ವೀರ ಗಾಥೆಗಳಲ್ಲಿ
ಅವನ ಆಸ್ಥೆ

ಒಡೆದು ಆಗುವನು ಹುಳ
ಭಾರಿ ಕಳವಳಗೊಂಡು
ತನ್ನದಾಗಿಸಿಕೊಂಡು
ಜಗದ ದುಃಖಗಳ

ಕ್ರಮೇಣ ಸುತ್ತ ಕೋಶ-
ಬೆಳೆದು ಅಂತರ್ಮುಖಿ
ಸ್ವಾಂತ ಸುಖಿ
ನಿದ್ರಾವಸ್ಥೆಗೆ ವಶ

ನಾಲ್ಕನೆಯದೇ ಪತಂಗ
ಬಲಿತು ಪಕ್ಕೆ
ಬಣ್ಣ ಬಣ್ಣದ ರೆಕ್ಕೆ
ಹಾರುವುದಕ್ಕೆ ಮಿತಿಯಿರದ ರಂಗ

ಇನ್ನು ಕೆಲವರ ಬದುಕು
ಧಾವಿಸಿ ಬೆಳಕಿನತ್ತ
ಭಗ್ಗನುರಿಯುತ್ತ
ಕಾವ್ಯವಾಗುವುದು ನಿಜಕು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪೇಚಾಟದ ಪ್ರಸಂಗಗಳು
Next post ಸಮಾಧಿ ಯೋಗ

ಸಣ್ಣ ಕತೆ

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

cheap jordans|wholesale air max|wholesale jordans|wholesale jewelry|wholesale jerseys