ಪದಗಳೊಂದಿಗೆ ನಾನು

ಪದಗಳೆಂದರೆ ನನಗೆ ಅಚ್ಚುಮೆಚ್ಚು
ದಿನಂಪ್ರತಿಯ ಅಭ್ಯಾಸವೂ
ಪದಗಳ ಹೊಸೆಯುವುದರಲ್ಲಿ,
ಮಸೆಯುವುದರಲ್ಲಿ:
ಆದರೆ ಆ ಪದಗಳಿಗೆ ಶಬ್ದಕೋಶದಿ
ಅರ್ಥಗಳ ಹುಡುಕಿ ಸೋತಿದ್ದೇನೆ.

ಹೊಸ ಹಾಡಿಗೆ ಕುಣಿದಾಡುವ
ನವಿಲುಗಳ ದಾರಿ ಕಾಯುತ್ತ,
ನಾನೇ ನವಿಲಾಗಬಯಸುತ್ತೇನೆ.
ಮತ್ತೆ ಕುಕಿಲದ ಗಾನಕ್ಕೆ ಪದ ಜೋಡಿಸಿ
ಶ್ರುತಿ ಕೂಡಿಸಿ ಹಾಡಾಗ ಬಯಸುತ್ತೇನೆ.

ಪದಗಳು ಪರಾರಿಯಾಗುತ್ತವೆ
ಆಗೊಮ್ಮೆ ಈಗೊಮ್ಮೆ ಸುಳಿವುಕೊಡದೆ,
ಪಕ್ಕಾ ಪರದೇಶಿಯಂತೆ.
ಹಳಹಳಿಸಿ ನೋಡುತ್ತೇನೆ:
ಪದಗಳ ಜೋಡಿಸಿ ಇಡಲಾಗದ್ದಕ್ಕೆ.

ನಡುರಾತ್ರಿಯಲ್ಲಿ ಕಂದೀಲ ಬೆಳಕಿನಲ್ಲಿ
ನಡಗುವ ಕೈಗಳು
ಆಡಿಯಾಡುತ್ತವೆ ಕೆತ್ತಿದ ಪದಗಳ ಮೇಲೆ,
ಕಂಗಳಿಂದ ಉದುರಿದ ಮುತ್ತೊಂದು
ಕರ ಸೋಕಿದಾಗ ಎಚ್ಚರ ಗೊಳ್ಳುತ್ತವೆ ಪದಗಳು,
ಸಡಿಲವಾಗಿಲ್ಲ ಎಲ್ಲಪದಗಳು
ಅವಕ್ಕೆ ಸಂದೂಕದ ಪೆಟ್ಟಿಗೆಯಲ್ಲಿಟ್ಟು
ಕಾಪಿಡು ಎನ್ನುತ್ತದೆ ಮನಸ್ಸು.

ಪದಗಳೆಂದರೆ ನನಗೆ ಅಲರ್ಜಿ
ನನ್ನೊಳಗಿನ ನನ್ನನ್ನು
ಹೊರಗಟ್ಟಿ ಅಣಕಿಸಿ ನಗುತ್ತವೆ.
ಹಾಡಾಗುವ ಬದಲು ಹಾವಾಗಿ
ಹಗೆಯ ಹೊಗೆ ಹಬ್ಬಿಸುತ್ತವೆ

ಪದಗಳೆಂದರೆ ನನಗೆ ಅಲರ್ಜಿ
ಪಟ್ಟಾಂಗದಲ್ಲಿ ಪದಗಳ ಭರ್ಜರಿ
ಬೇಟೆಯಾಡುವ ನಾನು
ಕಾರ್ಯಹೀನ ಕೆಲಸಗೇಡಿಯಾಗುತ್ತೇನೆ.

ಪದಗಳೆಂದರೆ ಅಚ್ಚುಮೆಚ್ಚು ಅಲರ್ಜಿ ನನಗೆ
ಪರಪರನೆ ಕೆರೆದುಕೊಳ್ಳುವ ಚಟವಿದ್ದ ಹಾಗೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿ ಜಿ ಭಟ್ಟರಿಗೆ
Next post ಕಿಡಿ

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

cheap jordans|wholesale air max|wholesale jordans|wholesale jewelry|wholesale jerseys