ಮುಂಗಟ್ಟೆ

ಸೃಷ್ಟಿಯಾ ಕುಶಲತೆಗೆ ದೃಷ್ಟಿಯಾ ಪರಿಣತಿಯೂ
ಬುವಿಭಾನು ಖಗಮಿಗದ ಅಖಂಡ ಕುಟೀರ.
ಹೊಳೆಯೂರ ರಹದಾರಿ ಹರಿಯುವಳು ಕರಿಕಾಳಿ
ಇಕ್ಕೆಲದ ವೃಕ್ಷನೆಲೆ ಮುಂಗಟ್ಟೆ ಪಕ್ಷಿಕಾಶಿ.

ಮಲೆನಾಡ ವಿಪಿನದೊಳು ಒಕ್ಕೊರಲ ಗಟ್ಟಿದನಿ
ಕಪ್ಪು ಬಿಳಿ ಕೆಂಪು ಬೂದು ಬಗೆಬಗೆಯ ವರ್ಣಮುಖಿ
ಸಂಜೆಯಾದರೆ ಸಂತೆ ಮರದ ತುದಿಯಲಿ ಬೊಂತೆ
ಸದ್ದುಗದ್ದಲವೇನು? ಸಂಗಾತಿ ಸತಿ ಜೇನು.

ಏಕಪತ್ನಿವೃತವು, ಹಿತವಾದ ಜೊತೆ ಶೃತಿಯು
ಮರದ ಪೊಟರೆಯ ಒಳಗೆ ಕಾವು ನೀಡುವ ತಾಯಿ
ಕೊಂಬಕೊಕ್ಕಲಿ ಬಾಯ್ಗೆ ಉಣಿಸು ನೀಡುವ ತಂದೆ
ಪಾಠವೈ ಈ ಬದುಕು ನರರ ಬಾಳ್ಗೆ.

ದಾಂಪತ್ಯ ದೀರ್ಘ, ಬದುಕು ಶತಮಾನ ಅರ್ಧ
ಮಾಂಸಾಹಾರವೂ ಸೈ ಸಸ್ಯಾಹಾರಕೂ ಜೈ
ಹಕ್ಕಿಗೀಂ ಎಣೆಯಿಲ್ಲ, ಮುಂಗಟ್ಟೆ ಬಹಳಿಲ್ಲ
ಅವಸಾನದಂಚಿನ ನೆಂಟನಿಹನು.
ನನ್ನಂತೆ ಅದರ ಬಗೆಯುವುದೇ ಕೈಲಾಸ
ಒಂದು ಅಳಿದರೂ ಸಾಕು ಈ ಬದುಕು
ವನವಾಸ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾತ್ರಿಕರು
Next post ಶಬರಿ – ೫

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

cheap jordans|wholesale air max|wholesale jordans|wholesale jewelry|wholesale jerseys