ಒಮ್ಮೊಮ್ಮೆ ಹೀಗೂ ಆಗುವುದು

ಹಿಂದೊಮ್ಮೆ ಕೂಡಾ ಹೀಗೆ ಆಗಿತ್ತಲ್ಲ.
ಗಂಟುಗಂಟಾಗಿ ಸಿಕ್ಕು ಬಿದ್ದು ಅ-
ಕ್ಷರದ ತಾರೆಗಳೆಲ್ಲ ನೆಲಕ್ಕೆ ಚೆಲ್ಲಿದಂತೆ
ಜ್ಞಾನಪಾತ್ರೆಯ ಎದುರು ಹಸಿದ ಕಂಗಳು
ಮೂರ್‍ಚೆಗೊಂಡ ಮನಸ್ಸು
ನಗ್ನವಾಗಿ ನಿಂತುಬಿಟ್ಟವು
ಕಾಲ ಚಲಿಸಲಿಲ್ಲ.

ಆದರೆ ಮಜ್ಜಿಗೆಯೂಡಿದ
ಮರುಗಳಿಗೆ
ಅಮಲು ಇಳಿಯುವುದು
ಕಣ್ಣುಗಳ ಮಂಜು ಮಬ್ಬು ಕರಗುವುದು.
ಒಳದೃಷ್ಟಿ ಬೆಳಗುವುದು
ಹೆಚ್ಚು ಹೆಚ್ಚು ವ್ಯಾಖ್ಯಾನಿಸಿದಷ್ಟು
ಒಳಾರ್ಥದ ಕುದಿ
ಕಂದಿಹೋಗುವುದು ಮಿತಿಯ ಗತಿ
ಸೆಳೆದಷ್ಟು ಮರ್‍ಮ ಬೆಳೆಯುವುದು.

ಭವದ ಬಲೆಯಲ್ಲಿ ತೂಗುತ್ತ
ಹಾಲಾಹಲ ಚೂರು ಚೂರೇ
ಸಂಗಾತಕ್ಕೆ ಸರಿಗಟ್ಟಿತು.
ಜೀವ ನಿಲ್ಲುವುದಿಲ್ಲ
ನೆಲ ನೀರು ಕೂಡಿತೆಂದರೆ
ಬರಡು ಮಲೆಯಾಯಿತು.
ಕಾಷ್ಠದ ತೊಗಲಿಗೂ ಮಿಂಚುಹುಳುಗಳು
ಮುಕುರಿ ಜಗ್ಗನೇ ಹೊಳಪು ಹೊದ್ದ
ಮನ ಮಿರುಗಿತು.
ಶಮನಗೊಂಡಿತು ಉರಿ.
ಹೊಲದ ಅಂಚು ಹೊದ್ದ
ಬೇಲಿಗಂಬವನ್ನು ಬಿಡದೆ
ಅಂಟಿಕೊಂಡರೂ ಗೆದ್ದಲು
ಚಿಗುರುಕ್ಕಿ ನಸುನಕ್ಕಿತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಖರ್ಬೂಜದ ಗಾಡಿ
Next post ವಿಜಯ ವಿಲಾಸ – ಪಂಚಮ ತರಂಗ

ಸಣ್ಣ ಕತೆ

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys