ಚಿಗುರು ಮೌನ

ಕರಿ ಎರಿ ಹೊಲದಲ್ಲಿ ಘಮ್ಮೆಂದು
ಕೆಂಪು ಹಾಯ್ದ ಬಳಿಜೋಳದ ತೆನೆ
ತೆನೆಗಳಲಿ ಹಕ್ಕಿಹಿಂಡು ಹಾಡು ಬಿಚ್ಚಿ
ಕೊಂಡ ಅನವು ಹೆಚ್ಚಾಗಿ ಹರಡಿತು
ಭೂಮಿ ಎದೆ ಕುಬುಸ ಬಿಚ್ಚಿಕೊಂಡ ಉಲಿತ.

ಮಾಗಿದ ಚಳಿಯ ಪದರಲಿ
ಸೋಸಿ ಸೂಸಿದ ಚಿಗುರ ಗಂಧಗಾಳಿ
ತೂರಿ ಜಿಗಿದವು ಕನಸುಗಳು
ಹೊಳೆ ಹೊಳೆದವು ಮನಸುಗಳು
ಮಾಗಿದ ಬಿಸಿಲಿನಲಿ ಕೊಡಲೆ ಹಾಸಿದವು ಕಾಳುಗಳು

ಒಡಲ ಹಸಿವಿಗೆ ತೆರೆದ ಬಯಲು
ಹಿಟ್ಟು ನಾದಿನಾದಿ ನಿಗಿ ನಿಗಿ ಸುಡುವ
ಬೆಂಕಿಯ ಮೇಲೆ ಹಂಚು ರಾಯ್ದು
ತಟ್ಟಿ ಏರಿಸಿದ ಎದೆಯ ಹದದ ರೊಟ್ಟಿ
ಕಳಚಿಕೊಂಡ ಎಲ್ಲಾ ಗುಡ್ಡೆಗಳ ಮೌನ ಕಂಪನಗಳು

ಹಸಿವಿಗೆ ಹಸಿರು, ನೀರು ಹಸಿರಿಗೆ,
ನೀರಿಗೆ ಮೋಡ, ಭವಕಂಪನ ಮೋಡಕೆ,
ಭೂಮಿಯ ಸೀಳುವ ಚಿಗುರ ಚೈತನ್ಯ,
ಸಣ್ಣ ಬೆಂಕಿಯಲಿ ಅರಳುವ ಅನಂತ ಮೌನ.
ಒಡೆಯದೇ ತಡೆಯದೇ ಹರಡಿದ ಬದುಕು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಿಡ ಮರಗಳಿಗೆ ಪಂಚೇಂದ್ರಿಯಗಳಿವೆ ಹುಶಾರ್!
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೬೨

ಸಣ್ಣ ಕತೆ

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

cheap jordans|wholesale air max|wholesale jordans|wholesale jewelry|wholesale jerseys