ಹಿತ್ತಲಲ್ಲಿ ಅಮ್ಮ

ಬೀಜ ಬಿತ್ತಿದ ಅಮ್ಮನ ಹಿತ್ತಲಲಿ
ಹಕ್ಕಿ ಪಕ್ಷಿಗಳ ಇನಿದನಿ ಚಿಮ್ಮಿ
ಅರಳಿ ಘಮ್ಮೆಂದು ಸೂಸಿ ನೆಲತುಂಬ
ಹರಡಿ ಹಾಸಿದ ಪಾರಿಜಾತ ಹೂರಾಶಿ.

ಅಲ್ಲೇ ಬಟ್ಟೆ ಒಗೆಯುವ ಕಲ್ಲಮೇಲೆ
ಮೂಡಿವೆ ಅವಳ ಕೈ ಬೆರಳ ಬಳೆಗಳ
ಚಿಕ್ಕೀ ನಾದ ರೇಖೆಗಳು ಚಿತ್ತ ಪಟ
ಪಾತರಗಿತ್ತಿಗಳ ಹಾರಾಟ ಎದೆಯೊಳಕೆ ಇಳಿದ ರಸಕಾವ್ಯ.

ಇಲ್ಲಿಯೇ ಇದ್ದ ತುಳಸಿ ಕಟ್ಟೆಯ
ಬಳಿ ಉರಿದ ನಂದಾದೀಪ ಅವಳ
ಕಣ್ಣಕಾಂತಿ ಚಿಗುರಿ ಹರಡಿದ ಬೆಳದಿಂಗಳು
ಮನದ ಮರದ ತುಂಬೆಲ್ಲ ಟೊಂಗೆ
ಟೊಂಗೆಗೆ ಮಿಂಚು ಹುಳುಗಳ ಮಿಣಿಮಿಣಿ ಭಾವ.

ಈ ಬಾವಿಕಟ್ಟೆಯ ತುಂಬಾ
ಅವಳ ಅನಂತ ಆಕಾಶ ಥಳಥಳ
ಹೊಳೆದ ಸೂರ್ಯ ಪ್ರೀತಿ ಮೊಗೆದು
ಹಬ್ಬಿ ಹದವಾಗಿ ಮುದವಾಗಿ ಅರಳಿದ
ಸಂಪಿಗೆ ಸೂಸಿತು ಸೀರೆಯ ಸರಭರ ಸಖೀ ಗೀತೆ.

ಹಿಮಗಿರಿಯ ಗಂಗೆ ಹರಿದ ಸೋಪಾನ
ಬಯಲು ಬೆಟ್ಟ ನದಿ ಕಾಡ ತುಂಬ
ಅರಿವು ಭಕ್ತಿ ಪ್ರೀತಿಗೆ ಒಲಿದ ಅವಳ
ಪ್ರೇಮ ಕಾವ್ಯ ಸಾಕಾರ ಹನಿ ಹನಿ
ಉಣಿಸಿದ ಬದುಕು ತಂಪು ಹೊಸ ಕಾವ್ಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಿಕ್ಷಣದ ಭಾಷೆ ಯಾವುದಿರಬೇಕು?
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೬೯

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

cheap jordans|wholesale air max|wholesale jordans|wholesale jewelry|wholesale jerseys