ಅಹಲ್ಯೆ

ಕನಸುಗಳು ಕತ್ತಲಲ್ಲಿ ಕರಗಿ ಹೋಗಿ
ಕಣ್ಣು ಮುಚ್ಚಿ ಕುಳಿತಾಗ ಉತ್ತರವಾಗಿ
ಮೆಲ್ಲಗೆ ನಿನ್ನ ಹೆಜ್ಜೆಯ ಸಪ್ಪಳಗಳು
ಇರುವೆಗಳಂತೆ ಸದ್ದು ಮಾಡದೇ
ಮುಚ್ಚಿದ ಬಾಗಿಲುಗಳ ಸಂದಿಯಿಂದ
ಹರಿದು ಬಂದಾಗ ಕಣ್ಣುಗಳ ತುದಿಯಿಂದ
ಹನಿಗಳು ಜಾರಿ ಬಿದ್ದವು ಮಂಕಾದಳು ಅಹಲ್ಯೆ

ಕಾಲುದಾರಿ ರಸ್ತೆರಹದಾರಿ ಏನೊಂದೂ ಆಗದ
ನನ್ನ ಪ್ರೇಮದ ನಡುಗೆ ಬರೀ
ಅವರಿವರ ಕಣ್ಣುಗಳ ನೋಟಗಳ ಅರೆಸುವಿಕೆ
ನೆನೆಪುಗಳು ತೂತು ತೂತಾದ ಜಾಲರಿಯ
ಭಂಗಿಗಳು ಸೋರಿಹೋದ ಕಣಗಳ ನೆನಪು
ಗೋಡೆ ಮೇಲಿನ ಗಡಿಯಾರ ಸುಮ್ಮನೆ
ಬಾರಿಸುತ್ತದೆ. ಗಂಟೆಗಳ ಕಾಯುತ್ತಾ ಕುಳಿತ ಅಹಲ್ಯೆ.

ಸ್ಪರ್ಶದಲಿ ಚಿಗುರಿನಲಿ ಮೌನದಲಿ
ಬೆರಗು ವಿಸ್ಮಯಗಳ ಹಾದಿ ಪಯಣದಲಿ
ಒಂಟಿ ಕಂದೀಲು ಹಿಡಿದು ಕಲ್ಲಾದ ಉಸಿರು
ಓಣಿಯ ತುಂಬೆಲ್ಲಾ ಬರೀ ಕೆಸರು ಯಾವ
ಸೂಚನೆಗಳು ಯೋಚನೆಗಳು ಗಾಳಿಯಲಿ
ನೀಲಿಯಲಿ ನದಿಯಲಿ ಹರಿದು ಬರೆಯಲು
ಕನಸುಗಳ ಬಣ್ಣದ ಎಳೆಗಳ ನೇಯ್ಗೆ, ಎದೆಯ ಮಗ್ಗದಲಿ
ಸ್ಪರ್ಶ ಸುಖದ ಕಾವು ಹರಡುವ ಸೂರ್ಯನಿಗಾಗಿ,
ಕಾಯುತ್ತಾ ಕುಳಿತ ಅಹಲ್ಯೆ ಇವಳು.

ಮೂಡಿಸಿದ ಮೂಡಲಲಿ ಕೆಂಪುಹಿತ
ಬಣ್ಣದೋಕುಳಿ ಆಡಿದ ಸಂಜೆಯ
ಬಾನಿನ ತುಂಬಾ ರೆಕ್ಕೆಗಳ ಬಿಚ್ಚಿ ಹಾರಾಡಿ
ಸಾಗಿದ ಬೆಳ್ಳಕ್ಕಿ ಹಿಂಡು, ಚಂದ್ರನಿಲ್ಲದ
ಇರುಳಲ್ಲಿ ನಕ್ಷತ್ರಗಳ ಲೋಕಗಳ ಚುಕ್ಕಿಗಳು
ಮಿನುಗಿ ಊರೆಲ್ಲಾ ನಿಶ್ಯಬ್ದ ಬಂದೇ ಬರುವ
ಅವನ ಹೆಜ್ಜೆ ಸಪ್ಪಳದಲ್ಲಿ ಕಲ್ಲಾಗಿ ಪವಡಿಸಿದ
ನಾಳೆಯ ಆಗಮಕೆ ಕಾದ ಅಹಲ್ಯೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಟಮಿನ್ ವಸ್ತ್ರ!
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೭೧

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys