ಅಭಿಮಾನವಿಡು

ಅಭಿಮಾನವಿರಲೀ,
ದೇಶ, ಭಾಷೆಯ ರೀತಿ, ನೀತಿಯ ಸಿರಿಯುಸಿರಲಿ,
ವಿಶ್ವಕೋಶದ,
ಧಮನಿ ದಮನಿಯ, ಬಿತ್ತಿ ಬೆಳೆಸಿದ ತೋಳಲಿ….
ಎಲ್ಲ ಲೋಕದ,
ನಾಕವಿದುವೆ ಪುಣ್ಯ, ಸಗ್ಗಕೆ ಭೂಮಿಕೆ,
ಜ್ಞಾನವೆಲ್ಲಕೂ
ಮೂಲವಿದುವೆ, ಧ್ಯಾನ ನಂದನ ಚಂದ್ರಿಕೆ,
ಧೃವಗಳೆಲ್ಲಕೂ
ಧೃವವ ತೋರಿದೆ ಈ ಮಣ್ಣಿನೆದೆಯ ಬಾಂದಳ,
ವಿಶ್ವನೇಹದೊಸುಗೆಗೆ
ಕೈಯ ಚಾಚಿದೆ ಕಂದದಂದದ ಜೋಗುಳ,
ಎಲ್ಲ ಸಂಸ್ಕೃತಿ ಸಾರವಿಲ್ಲಿ,
ಉತ್ಕೃತಿಯ ತೆರದ ಹರಹಿನಲ್ಹಬ್ಬಿದೆ
ನೂರು-ಸಾವಿರ-ಕೋಟಿ ತತ್ವವ
ಮಾನ್ಯ ಭಾವ ದೇಶದಿ ತಬ್ಬಿದೆ
ಬರಿಮಣ್ಣಲ್ಲದ
ಈ ಮಣ್ಣಲಿ ವಿಶ್ವದೈವದ ಬಲವಿದೆ,
ವ್ಯಷ್ಠಿಯಲ್ಲದ
ಸಮಷ್ಠಿಬಲದಲಿ ಜೀವನವು ತಾ ಸಾಗಿದೆ.

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕುಂಬಾರಕಿ ಈಕಿ ಕುಂಬಾರಕಿ
Next post ಕುರುವರಿಯದ ಕುಂಬಾರಗ ಹೇಳಲು

ಸಣ್ಣ ಕತೆ

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

cheap jordans|wholesale air max|wholesale jordans|wholesale jewelry|wholesale jerseys