ಕೆ.ಎಸ್. ನರಸಿಂಹಸ್ವಾಮಿ

ಶಬ್ದಕೋಶವ ಎಸೆದು ಜನದ ನಾಲಿಗೆಯಿಂದ
ಮಾತನೆತ್ತಿದ ಜಾಣ, ನೇರಗಿಡದಿಂದಲೇ
ಹೂವ ಬಿಡಿಸುವ ಧ್ಯಾನ; ತೊಟ್ಟ ಮಾತೆಲ್ಲವೂ
ಗುರಿಗೆ ತಪ್ಪದ ಬಾಣ. ಕವಿತೆ ಜೊತೆ ಮೊದಲೆಲ್ಲ
ಮನ್ಮಥ ಮಹೋತ್ಸವ, ಪ್ರೀತಿಗೆ ರಥೋತ್ಸವ.
ಮಲ್ಲಿಗೆಯ ಹೆದೆಯಲ್ಲಿ ಹೂಡಿ ಚಿಮ್ಮಿದ ನುಡಿಗೆ
ಇಡಿಯ ನಾಡೇ ಸ್ತಬ್ಧ, ಸಂತೃಪ್ತ. ಆದರೂ
ಜೊತೆಯವರ ಕೊಂಕುನುಡಿ: “ಎಷ್ಟು ದಿನ ನಡೆದೀರಿ
ಸೀರೆಯ ಸೆರಗ ಹಿಡಿದು? ಬಿಟ್ಟು ಬಿಡಿ” ಬಿಟ್ಟ ಕವಿ,
ಹತ್ತಿ ಹಚ್ಚಿದ ಶಿಖಿರದಿಂದ ಶಿಖಿರಕ್ಕೇರಿ
ಬೆಟ್ಟದ ಮುಡಿಗೆ ಬೆಳಕ. ಕಣಿವೆಯೊಳಕ್ಕೂ ಈಗ
ಮಾತನಾಡುವ ತವಕ, ಟೀಕಾಕಾರ ಮೂಕ.

ನಿಮ್ಮಂತೆ ಅರಳಿ, ಸುತ್ತೆಲ್ಲ ಪರಿಮಳ ಚೆಲ್ಲಿ ಯಾರು ಬಾಳಿದರು?
ಜನದ ಎದೆ‌ಎದೆಯಲ್ಲೂ ಸಿಂಹಾಸನವನೇರಿ ಯಾರು ಆಳಿದರು ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾರಣ
Next post ಜಗವೇ ಯೋಗಂ ಮಾಧುರ್ಯಂ

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

cheap jordans|wholesale air max|wholesale jordans|wholesale jewelry|wholesale jerseys