ಸೀಮಂತಿನಿ

ಯಾರಿವಳು?
ಇದ್ದಕ್ಕಿದ್ದಂತೆ ಪಕ್ಕದಲೆ ಬದಲಾದವಳು?
ಗಂಡನೆಂಬವನನ್ನ ಕಂಡ ಕಂಡಂತೆಯೇ
ಕಂದ ಎಂಬಂತೆ ಮಮತೆಯಲಿ ಮಾತಾಡುವಳು!
ಅಪ್ಪ ಬಂದವನನ್ನು ತಪ್ಪು ಮಾಡಿದ ಎಳೆಯನಂತೆ
ಉಡಿಯಲ್ಲಿ ಹಾಕಿ ಶಮಿಸಿದವಳು
ಗುಟುರು ಮದವನು ಮೆಟ್ಟಿ ಎದ್ದ ಹೆಡೆಯನು ತಟ್ಟಿ
ಹೊಲೆಗಸದ ತೊಟ್ಟಿಯನು ಹೀಗೆ ತೊಳೆದವಳು?

ಇವಳೆ
ಬೆನ್ನ ಬಳಿ ಬಂದು ಕೊರಳಿಗೆ ತೂಗುತಿದ್ದವಳು?
ಕೈಯ ಪುಸ್ತಕವನ್ನು ಕಿತ್ತು ಗೂಡೊಳಗೆಸೆದು
ಸಾಕು ಬಿಡಿ ಸನ್ಯಾಸ ಎಂದು ತೋಳೆಳೆದವಳು!
ಕೆನ್ನೆಯಲಿ ಬೆರಳಿಟ್ಬು
ಕೊರಳ ಸರ ತುಟಿಗಿಟ್ಬು
ಏನೊ ಕಕಮಕ ಹಿಡಿಸಿ ಗೆದ್ದು ನಕ್ಕವಳು?
ಈಗ ಅದೆ ಹುಡುಗಿ
ಬೇಸಿಗೆಯ ಉರಿಗಣ್ಣ
ಬೆಳುದಿಂಗಳಲಿ ತೊಳೆದು
ಗರ್ಭಗುಡಿ ಹಣತೆಯನು ಹಚ್ಚಿರುವಳು ;
ಮೊನ್ನೆ ಸೀಮಂತದಲಿ ಹಸೆಯೇರಿದಾಗಿಂದ
ಜಗದಂಬೆ ಭಾವಕ್ಕೆ ಸಂದಿರುವಳು!

ಒಲೆ ಮೇಲೆ ಅನ್ನ ಸೀಯುತ್ತೆಲಿದೆ ಮೊನ್ನೆ;
ಎದುರಿಗೇ ಕುಳಿತು
ಹಾಲಪಾತ್ರೆಗೆ ಬಿದ್ದ ಇರುವೆಗಳ ಮೇಲೆತ್ತಿ
ನೆಲಕಿಳಿಸಿ ಹರಿಯಬಿಡುತಿದ್ದಾಳೆ, ಒಂದೊಂದೆ !
ಪೊರಕೆ ತುದಿಯಲಿ ಹಿಂದೆ
ಜಿರಲೆಗಳ ಬಡಿದವಳು ಇವಳೆ ?

“ಪಾಪ” ಎಂದರೆ – ‘ಅಹ! ಶುದ್ದ ಕನ್ನಡಿಗ’
ಎ೦ದು ಛೇಡಿಸಿದವಳು!
ಈಗ ಹೊರಳಿದೆ ಕರುಳು,
ಮೊದಲ ಬಾರಿಗೆ ಬಸಿರ ಸವರಿದೆ ಯಶೋದೆಯ
ಬೆಣ್ಣೆ ಬೆರಳು.

ಎಲ್ಲಿ ತಲೆಮರೆಸಿಕೊಂಡುವೊ ಏನೊ ಈಗಿವಳ
ಸಿನಿಮ ಹೋಟೆಲುಗಳಿಗೆ ಅಲೆವ ಚೆಪಲ,
ಆಗೀಗ (ನನ್ನನೂ ಜೊತೆಗೆಳೆದುಕೊಂಡು!)
ದೇವಸ್ಥಾನ ಯಾತ್ರೆಯಷ್ಟೇ ಈಗ ಎಲ್ಲ!
ಮುಡಿತುಂಬ ಹಣೆತುಂಬ ಕೈತುಂಬ ತನ್ನೆಲ್ಲ
ಮಾಂಗಲ್ಯ ಸೌಭಾಗ್ಯ ಮೆರೆಸಿ,
ಶಾಂತಮುಖದೊಳಗೊಂದು ಮರುಳುನಗೆ ನಿಲಿಸಿ,
ಇವಳೀಗ ಕಾರ್ತೀಕದಾಗಸದ ಹಾಡು,
ಕಣ್ಣೊ ಹುಣ್ಣಿಮೆಯಿರುಳ ಕಡಲ ಬೀಡು!

ಜೊತೆಗೆ ನಡೆವಾಗ
ನನ್ನ ಹೆಜ್ಜೆಗು ಹೆಜ್ಜೆ ಮುಂದೆಯಿಟ್ಬು,
ಈಗ? ಎಂಬಂತೆ ಹುಬ್ಬೆತ್ತರಿಸಿ ನಕ್ಕು ಸ್ಪರ್ಧಿಸಿದ್ದವಳು
ಈಗೆಲ್ಲ ಅಬ್ಬರ ಬಿಟ್ಟು
ಕಾಲೆಳೆಯುವಳು ಏಕೊ ತೀರ.
ಕನಸುಗಣ್ಣಿಗೆ ದಾರಿಯಲ್ಲು ಏನೋ ಧ್ಯಾನ,
ಮೈ ಮಾತ್ರ ಇಲ್ಲಿ ಮನಸೆಲ್ಲೊ ಹೊರಟಿದೆ ಯಾನ,
ಅಡಿಗಡಿಗು ಒ೦ದೊ೦ದು ಗುಡಿಕಟ್ಚಿ ಬಾಗಿಲಲಿ
ಹೊರಳಿ ಬೇಡಿದೆ ಮಗುವಿಗಭಯದಾನ.
ಎಲ್ಲ ಬಾಳಲಿ ಎಂಬ ಭಾವ
ಚೆಲ್ಲುತಿದೆ ಕಣ್ಣು, ಅಲುಗಿದೆ ಹೊಟ್ಟೆಯೊಳಗಿರುವ ಪುಟ್ಟ ಜೀವ;
ಗಟ್ಚಿ ಸ್ವಾರ್ಥಕೆ ಈಗ ಮಳೆ ಬಿದ್ದು ಮೈಯೊಡೆದು
ಉಸಿರಾಡುತಿದೆ ಮಣ್ಣ ತೇವ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರ್ಣ
Next post ತೂಗು ಸತ್ಯದ ಗಾನಕೆ

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

cheap jordans|wholesale air max|wholesale jordans|wholesale jewelry|wholesale jerseys