ಸಾವು

ಕಂಡಿರುವೆ ಮೂರು ಸಲ ಇವನ ಮೋರೆ,
ಮನೆಯಂಗಳಕೆ ನುಗ್ಗಿ ಹೀಚು ಹರಿವಾಗ,
ನೋಡುವರ ಕೈಕಟ್ಟಿ ಹಗಲೆ ಲೂಟಿಯ ಹೊಡೆವ ದರೋಡೆಕೋರ
ಹಂಡೆಯಂಥಾ ಹೊಟ್ಟೆ, ಕಿರುಬೆಂಡುಗಾಲು,
ಉಂಡದ್ದು ಉದರ ಸೇರದ ಯಾವ ರೋಗವೋ!
ತಿನಿಮೋರೆ ಚಂದವೋ, ಅರಕೆ ಅತೃಪ್ತಿಗಳೆ
ತೇದ ಇದ್ದಿಲಿನಲ್ಲಿ ಗೆರೆನಿಂತೆ ಬರಲುಮುಖ;
ರೆಪ್ಪೆ ತಡೆಯೂ ಇರದ ಬತ್ತುಗಣ್ಣೊಡಲಲ್ಲಿ
ನೆತ್ತರನೆ ಹೆಪ್ಪುಗಟ್ಟಿಸುವ ಥಣ್ಣನೆ ಬೆಳಕುಗೋಲಿ,
ಜೋಲ್ವ ಗೊಣೆಸಿಂಬಳದ ಬಣ್ಣದಾಲಿ;
ಕಪ್ಪು ಹಾವಂಥ ಉದ್ದನೆ ನಂಜುಗೈ ಚಾಚಿ,
ಉತ್ತಬಿತ್ತಗಳನ್ನೆ ಹೆಕ್ಕಿ,
ಹುಬ್ಬೆತ್ತಿ ನಗುವ ಲೊಟಕರಿಸಿ ನೆಕ್ಕಿ.

ಈಚೀಚೆ ಎಲ್ಲೆಲ್ಲು ಇವನ ನೆರಳು-
ಮೂಳೆಗಣ್ಣಿನ ಸುತ್ತ ಕರಿಯುಂಗುರವ ಬೆಳೆದ
ಮೂವತ್ತು ದಾಟಿರುವ ಬ್ರಹ್ಮಚಾರಿ;
ಆಳತೋಳಿಗೆ ದಬ್ಬಿ ಮಗುವನು, ಸಮಾಜದಲಿ
ಭಾಷಣದ ಸೇವೆ ನಡೆಸಿಹ ಶ್ರೀಮತಿ;
ಅಕ್ಕಿಯಂಗಡಿ ಮುಂದೆ ಮೈಲುದ್ದ ಕ್ಯೂನಿಂತು,
ಬೆವರಿಡುವ ಮುಖವ ಚೀಲದಲೆ ಒರೆಸುತ್ತಿರುವ
ಕಂಗಾಲುಗಣ್ಣಿನ ಸ್ವತಂತ್ರ ಗಣರಾಜ್ಯ;
ತಿವಿದಾಗ ಎಚ್ಚತ್ತು ಗಡಬಡಿಸಿ ಕೈಯೆತ್ತಿ
ನಿರ್ಣಯವ ಪಾಸುಮಾಡುವ ಪಕ್ಷ ಬಹುಮತ;
– ಇಲ್ಲೆಲ್ಲ ಆಡಿದಂತಿದೆ ಇವನ ಬೆರಳು.

ಇವನ ಮೈ ಒಮ್ಮೊಮ್ಮೆ ಬೆಳೆದು ಹರಡುವುದು
ಮಣ್ಣು ಮುಗಿಲಿನ ನಡುವೆ ನಂಜುತೆರೆಯಾಗಿ
ನಡುನಡುವೆ ಹರುಕಾಗಿ ಮೋಡಿ ಕೂಗುವುದು.
ಕಾರು ಮೋಟರು ರೈಲು ಕೈಗಾಡಿ ಪ್ಲೇನು,
ನರ ನಾಯಿ ಗಿಡ ಬಳ್ಳಿ ಕಾಗೆ ಗಿಳಿ ಮೀನು,
ಮಗು ಮುದುಕ ಮೊಳಕೆ ಮರ ಮಿಡಿ ಹೀಚು ಹಣ್ಣು-
ಎಲ್ಲಕ್ಕು ಸ್ಫರ್ಧೆ ಆಗ
ಹರುಕಿನಲಿ ತೂರುವಾಗ.
ತೆರೆ ತೂರಿದರೆ ಉಳಿವು
ತಡೆದು ಕೆಡೆದರೆ ಮುಗಿವು.
ತೆರೆ ಬಡಿದು ಸಿಡಿದ ಹರಣದ ಹರಹು ಕಂಡಾಗ
ಬೆರಗಾಗಿ ಬುದ್ಧಿಗನಿಸುವುದು,
ಸಾವೆ ಪ್ರಕೃತಿ, ಬಾಳೆ ವಿಕೃತಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಡುಗೆ
Next post ನಾ ಸೈ ನೀ ಸೈ

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

cheap jordans|wholesale air max|wholesale jordans|wholesale jewelry|wholesale jerseys