ಊರ್ಮಿಳೆ

ಕರೆದರೂ ತಿರುಗದೆ
ಜಿಗಿದು ಓಡಿದಳಲ್ಲ,
ಯಾರಿವಳು ಎರಳೆಮರಿ ಎಂದಿರೆ?
ಇವಳೆ ಊರ್ಮಿಳೆ, ತುಂಬುಜಂಬುನೇರಳೆ
ನಮ್ಮ ಮಲೆನಾಡ ಸಿಹಿಪೇರಲೆ.
ನನಗು ಇವಳಿಗು ಸ್ನೇಹ ತೀರ ಈಚೆಗೆ ಎನ್ನಿ
ನನ್ನ ಕಂಡರೆ ನಾಚಿಕೆ,
ಪ್ರೀತಿಯಲಿ ಬಾ ಎಂದು ರಮಿಸಿದರೆ ನಿಲ್ಲುವಳು
ನಾಲ್ಕಾರು ಮಾರಾಚೆಗೆ –
ಮತ್ತೊಮ್ಮೆ ಕರೆದಾನೆ ಎಂಬಾಸೆ ಮಿನುಗುವುದು
ಕಣ್ಣ ತಿಳಿತೆರೆಯಾಚೆಗೆ.
ನಮ್ಮ ನಡುವಿನ ಇಂಥ ಅಂತರಕೆ ನಾನಿಟ್ಟೆ
ಚಾಕಲೇಟಿನ ಸೇತುವೆ!

ಪುಟ್ಟ ಕಣ್ದೊಟ್ಟಿಲಲಿ
ಮಿಂಚರಸದಲಿ ನೆನೆದ ಎರಡು ಕರಿಗೋಲಿ,
ಬಾನು ಕಡಲರಿಯದದರಾಳದಲಿ ಬ್ರಹ್ಮಾಂಡ
ಹೊಡೆಯುವುದು ಜೋಲಿ,
ತುಟಿ ತೆರೆದರಿವಳು-
ಬಾನು ಬುವಿಯನು ತಬ್ಬಿ
ಹಗಲು ಇರುಳನು ದಬ್ಬಿ
ಮರಮರದಿ ಹಾಡುವುವು ಹಕ್ಕಿ ಕೊರಳುಬ್ಬಿ;
ಹೂ ಸುರಿದು ಹಣ್ ಬಿರಿದು
ದಡದಡನೆ ಹೊಳೆ ಹರಿದು
ಇಳೆಗೆ ಮಳೆ ತುಳುಕುವುದು ಹೂಬಿಸಿಲು ಹಬ್ಬಿ!

ಕಿಲಕಿಲನೆ ನಕ್ಕಳೆಂದರೆ ಇವಳು
ಜಡಕು ಕಚಗುಳಿಯನಿಟ್ಟಂತೆ,
ಹರಿದ ಕರಿಮುಗಿಲಲ್ಲಿ ಮಲಗಿರುವ ಬಾನಿಗೆ
ಹುಣ್ಣಿಮೆಯ ಹಾಲು ಹರಿದಂತೆ,
ಕರಿಯ ಕಿರುಜಡೆ ಬೆಣ್ಣೆಗನ್ನೆ ಮೇಲಿಳಿದಿರಲು
ಮಿಂಚು ಮುಗಿಲಾಟದಂತೆ,
ಹೂಗಾಲನಿಟ್ಟು ಜಿಗಿದರೆ ಅದರ ಸ್ಪರ್ಶಕೇ
ಪುಳಕ ನೆಲಕೆ!

ತುಂಬುಕಿತ್ತಲೆಗೆನ್ನೆ ಮಿಂಚುಗಣ್ಣಿನ ಹುಡುಗಿ
ಹೂಮೈಯ ಬೆಡಗಿ!
ತಿಂಗಳನೆ ನಾಚಿಸುವ ಬೆಣ್ಣೆಗೆನ್ನೆಯೊಳೊಂದು
ಕಪ್ಪು ಕಲೆ ಮಿರುಗಿ
ಮುದ್ದು ಮುಖದೊಳಗೊಮ್ಮೆ ತುಂಟನಗೆ ತುಳುಕಿಸಲು
ನಾ ಮೈಯ ಮರೆತು,
ಮುತ್ತಮಳೆ ಸುರಿಸುವೆನು ನೋಯುವುದೊ ಹೂಗೆನ್ನೆ
ಎಂಬುದನೂ ಮರೆತು.

ನಿನ್ನಂಥ ನೆರೆಯಿರಲು
ಯಾವ ಭಾಗ್ಯಕೆ ನನಗೆ ಕಡಮೆ ಹೇಳು?
ನೀ ನನ್ನ ಬಳಿಯಲಿರೆ
ಮುಕ್ತಿಯೂ ಬೇಡ ಸಾಕಿಂಥ ಬಾಳು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಸಿಕತೆ
Next post ಶ್ರೀ ಸತ್ಯ ಶಿವಯುಗದ ಕಲ್ಪತರಲಿ

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

cheap jordans|wholesale air max|wholesale jordans|wholesale jewelry|wholesale jerseys