ಮಾತಿನವರು

ಬರಿ ಗಂಗೆ ಗೌರೀಶಂಕರ
ರಾವಣಾಸುರ ಮಥನ ದಿವ್ಯನಡತೆಯ ಕಥನ
ಹಗಲಲ್ಲಿ
ಹತ್ತು ಜನರೆದುರಲ್ಲಿ
ಸತ್ತರೂ ನಿಲ್ಲುವ ಶಾಸನದಲ್ಲಿ;
ಕೊಳೆವ ಗದ್ದಲದ ವಠಾರ
ನಿಂತ ನೀರ ಗಬ್ಬುಗಟಾರ
ಬಾಗಿದವನ ಬೆನ್ನ ಕುತಾರ
ಹಿತ್ತಿಲಲ್ಲಿ
ಗುಪ್ತಚಾರರ ಜೊತೆ ಕತ್ತಲಲ್ಲಿ
ಗಾಳಿ ಹಾರಿಸಿಬಿಡುವ ಮಾತಿನಲ್ಲಿ
ಕೈಹಿಡಿದ ಬರೆಹಕ್ಕೆ ಕಣುತಪ್ಪಿಸಿ ಇವರ
ನಾಲಿಗೆಯ ಹೆರಿಗೆ.
ನ್ಯಾಯ ಒಪ್ಪಿಸಿ ಎಂದು ಕೇಳುವಂತಿಲ್ಲ,
ದಾಖಲೆ ಸುಟ್ಬು ಕೋರ್ಟಿನ ಕಣ್ಣು ತಪ್ಪಿಸುವ ಜೋಕೆ
ಬೇಕಾದಷ್ಟಿದೆ ಈ ಮಳ್ಳರಿಗೆ.

ಯಾವುದರ ದರಕಾರ ಹೊಣೆ ಹೊರೆ ಇರದ ಧಣಿಗೆ?
ಮಾತಿಗೆ ತೊಡಗಿದರೆ ಕೂತವರಿಗೆ ಕಾಣದೆ
ಹಿಗ್ಗತೊಡಗುತ್ತದೆ ಸುತ್ತಲ ಬೇಲಿ
ಬೆಚ್ಚಗಾಗುತ್ತದೆ ಕೈ ಬೆಚ್ಚಗಾಗುತ್ತದೆ ಎದೆ
ಸ್ವಿಚ್ಚು ಒತ್ತಿ ಬಿಡುತ್ತದೆ ನಾಲಿಗೆ, ಕೂಡಲೆ
ಮುಳ್ಳು ಸುರಿಸತೊಡಗುತ್ತದೆ ನಿಂತ ನೆಲಕ್ಕೆ ಜಾಲಿ.
ಆಡುತ್ತ ಆಡುತ್ತ ಮೂಡಿನಲ್ಲಿ ಮಾತು ಕೊಂಕುತ್ತದೆ
ಕೊಂಕುತ್ತ ಕೊಂಕುತ್ತ ಯಾವುದೊ ತಿರುವಿನಲ್ಲಿ ಬೊಂಕುತ್ತದೆ.

ಆಡಿದ್ದೆಲ್ಲ ಹಾಡಾಗಿ
ಹಾಡಿಗೆ ಹಾವು ಹೆಡೆತೂಗಿ
ಗೆದ್ದಿಲ ಸದ್ದಿಲ್ಲದೆ ಕಲೆ ಯಮದೂತನ ಬೀಡಾಗುತ್ತದೆ.
ಅರವತ್ತರ ಎಚ್ಚರಕ್ಕೆ
ಇಪ್ಪತ್ತರ ಪರವಶತೆ
ಸರಿಬೆಸ ಕೇಳುತ್ತದೆ
ರೂಪ ರುಚಿ ರಸದಲ್ಲಿ ಸತ್ಯ ಸಾಯುತ್ತದೆ.

ಬೆತ್ತಲೆ ಬುದ್ಧಿಗೆ ಮಾರಕ ಹಿತ್ತಾಳೆ ಕಿವಿ
ಆಗ ತತ್ವಕ್ಕೆ ಮುತ್ತಿಡುತ್ತದೆ ತುಟಿ, ಮನಸ್ಸು ಶುದ್ಧ ಭವಿ,
ಮುತ್ತೈದೆ ನಾಲಿಗೆಮುಡಿಗೆ
ಸೂಳೆ ಮನಸ್ಸಿನ ತೊಡೆಗೆ
ನಿತ್ಯ ನಿತ್ಯ ನಡೆಯುತ್ತದೆ ಭಾರಿ ಹಣಾಹಣಿ
ಎಲ್ಲ ಒಳಗೊಳಗೆ.
ಬೆರಳು ಚೀಪುವ ‘ಘ’ಗಳೆದುರಿಗೆ
ನೀರಿಗೆ ಬಿದ್ದ ಎಣ್ಣೆಹನಿ,
ಎಲ್ಲ ಅಪ್ಪಿಯೂ ಎಲ್ಲೂ ತಪ್ಪದ
‘ಪದ್ಮಪತ್ರಮಿವಾಂಭಸ’ರ ದನಿ

ಇವರ ಕೋರೆಮಾತಿನ ಹಾರೆಯೇಟಿಗೆ
ಮುರಿದು ಬೀಳದೆ ಮನೆ
ಮುರಿದು ಬೀಳದೆ ಕೊನೆ
ಸುರಿದು ಹೋಗದೆ ತೊಟ್ಟುಮುರಿದು
ಕಾಯ ಬಾಯಿಂದ ಹಾಲು ಸೊನೆ?
ಬಿದ್ದ ಕೊನೆಯಲ್ಲಿ ಬಾಡುಮೈಯಾಗಿ
ಹಾಡದೆ ಸಂಧ್ಯಾರಾಗವ ಇನ್ನೂ
ಮಧ್ಯಾಹ್ನದ ಅರೆಬಿರಿದ ಮೊಗ್ಗುನನೆ?

ಚಟಕ್ಕೆ ಮಾತು ಹುಟ್ಟಿಸಿ ಹಟಕ್ಕೆ ಸಾಕುವುದ?
ರಂಗಿನ ಅಂಗಿ ತೊಡಿಸಿ ಸಿಂಗರಿಸಿ ಮರೆಸುವುದ?
ಹಣ್ಣಿನ ಬಳ್ಳಿಯ ಮೇಲೆ ಮಿಣ್ಣಗೆ ಮುಳ್ಳು ಹಬ್ಬಿಸಿ
ಸುಳ್ಳೇ ಅದರ ಬಾಳಿಗೆ ಎಳ್ಳು ನೀರು ಬಿಡುವುದ?

ಸದಾ ಇದೊಂದೆ ಬೆರಗು ನನಗೆ
ಬೆರಗಿನೊಡನೆ ಕೊರಗು ಮರೆಗೆ
ಹೇಗೆ ತಿಳಿದೇನು ಇವರ ಮಾತಿನ
ತಳಾತಳದ ಸುಳಿಯ?
ಹೇಗೆ ಹೊಡೆದೇನು ಇವರ ನಾಲಿಗೆ ಹಾವು ನುಗ್ಗಿದ
ಮನೆ ಬಿಲಕ್ಕೆ ಬೆಣೆಯ?
ಹಿಡಿದೇನು ಹೇಗೆ ಪೊದೆ ಮರೆಯಲ್ಲಿ ಅಡಗಿದ
ಪಳಗಿದ ನರಿಯ
ಈ ನಾಟಕಕಾರರ ಕೃಷ್ಣವೇಷದ ನಿಜವ
ತಿಳಿವೆನೆಂದರೆ ಅವನ
ಕುಚೇಲರಷ್ಟೆ ಬಲ್ಲರು ಗೆಳೆಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವೃದ್ಧಾಪ್ಯ
Next post ಕಡೆಕಂಜಿ

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

cheap jordans|wholesale air max|wholesale jordans|wholesale jewelry|wholesale jerseys