ಹೊಸ ದಿಗಂತ

ಮತ್ತೆ ಹಾಡುತಲಿರುವೆ ಏಕೆ
ಹಳೆಯ ಪಾಡಿನ ಪಲ್ಲವಿ,
ನಿತ್ಯ ಸಾಗುತಲಿರುವೆ ಗಾನಕೆ
ಬರಲಿ ಸಮದಾ ಜಾಹ್ನವಿ,

ಜ್ಞಾನ-ವಿಜ್ಞಾನದ
ಹಾದಿ ಸಾಗಿದೆ ನೀಲನಭದಾ ಆಚೆಗೆ,
ನಿತ್ಯ ಶೋಧನ ಯಾತ್ರೆ ಹೊರಟಿದೆ ಹುಟ್ಟು-ಸಾವಿನ ಅಂಚಿಗೆ,

ಇನ್ನು ಬಿಡು ನೀ ಹಳೆಯ ಹಾಡಲಿ
ಬಣ್ಣ-ಬಣ್ಣದ ಬಣ್ಣನೆ,
ಮತ್ತೆ-ಮತ್ತೆ ಕಟ್ಟುವೇತಕೆ
ವರ್ಣ-ವರ್ಣದ ಬೆಡಗನೆ,

ನಾಕ ನಂದನ, ನರಕ ಬಂಧನ
ಕಲ್ಬಾಂತರ ಸ್ಥಾಯಿಯೋ,
ನಿಜಾನಂದದ ಸತ್ಯ ಚೇತನ
ಬರೀ ಮೂರ್ತಿವೆಂಬುದೆ ಮಾಯೆಯೋ,

ಗ್ರಹ ಪೂರ್ವಾಗ್ರಹ ತೊರೆದ ಕಣ್ಣಿಗೆ
ಅಣುವಣುವೆ ಶಿವ-ಶಿವೆ ಚೇತನ,
ಮಾತೃ ಮಮತೆಯ ನೇಹದೆದೆಗೆ
ಕಣ-ಕಣವದಮೃತ ಸಿಂಚನ

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೇಳಯ್ಯ ಹುಲಿರಾಯ, ನಾನು ಮೆಟ್ಟಿದ ಭೂಮಿ ಬೆಳೆವುದು
Next post ಹಾರೈಕೆ

ಸಣ್ಣ ಕತೆ

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

cheap jordans|wholesale air max|wholesale jordans|wholesale jewelry|wholesale jerseys