ಕನ್ನಡಿ

ಕಳವಳವು ಕನಸಿಂದ ಬೆಳಗಾಗಿ ಬಲುಕಾಲ
ಕಳೆದು ಹೋಯ್ತೆನುತಾಗ ತಿಳಿವಿನಾ ರಾಣಿತಾ
ನಿಳಿದು ಮಂಚವ ಬೇಗ ತಿಳಿನೀರ ಮಿಂದೆದ್ದು
ಬಿಳಿ ಮಡಿಯ ಶೆಳೆದುಡುತಲೆ

ತರಣಿಗರ್ಘ್ಯವನಿತ್ತು ಅರಿವಿನಾರಾಣಿ ಜಪ
ಸರವ ಪಿಡಿದಾಗ ಕುಳಿತಿರುತಲರ ಘಳಿಗೆಯುರು
ತರದ ಶಾಂತಿಯ ಸವಿದು ತೆರೆದು ಕಂಗಳ ದೇವಿ
ಸರಸತಿಯು ನಸು ನಗುತಲೆ

ಪದುಮ ಪೀಠವನಿಳಿದು ಇದುಗೊ ಸಿಂಗರವಾಗಿ
ಮುದದಿ ಮನದಿನಿಯನಡಿಗೆರಗಿ ಬರುವೆ
ಹದಿನೆಂಟು ಶತಮಾನ ಪುದಿದ ದುಮ್ಮಾನದಲಿ
ಮುದ ಹಾಸವರಿಯದಲೆ ಕೊರಗಿ ಕುಳಿತೆ

ಗುಜರಾತ ಗಗ್ಗರವು ಪದಪದಕೆ ಧನಿಗೊಡಲು
ಗಜಬಜಿಯ ಮಗುವಂತೆ ಮುದವಿಟ್ಟು ಅನುಸರಿಸಿ
ವಿಜಯ ವಂಗದ ಶಂಖದಂದವಹ ಚೂಡಿಗಳು
ಕಿಂಕಿಣನೆ ಧನಿಗೈಯುತ

ಭಾರತಿಯ ಬಲು ಮಧುರ ಹಾವ ಭಾವಗಳನ್ನು
ತೋರಿ ನಲಿದೊಲಿಯೆ ಮಾರರವದಿಂಪಿನಲಿ
ಪೂರವದ ನೆನಹೆಂಬ ಹಿರಿಶೆರಗಿನಂಬರವ
ನಿರಿ ಹಿಡಿದು ತಾನುಟ್ಟಳು

ಸಂಸ್ಕೃತದ ಕಾಂಚಿಯ! ಹೊಳೆವ ಗೆಜ್ಜೆಗಳಲುಗೆ
ಝೇಂಕರಿಸೆ ಜಯಕೆನುತ ಬಳೆಗಗ್ಗರಗಳೆಲ್ಲ
ಬಿಂಕದಲಿ ಗಂಟಿಕ್ಕಿ ರಸಗಬ್ಬ ಕುಪ್ಪುಸವ
ಬಿಗಿಯು ಹಳದೆನುತ ನಗುತ!

ಅಂದವಿದು ಕುಂಕುಮವು ಹಿಂದಿಯಾ ನವ ರಾಗ
ದಿಂದ ಕೂಡಿಹುದೆನುತ ಒಂದು ಬೆರಳಲಿ ತೇದು
ಎಂದಿನಾ ನೆಪ್ಪಿನಲಿ ಹಣೆಗಿಟ್ಟಳವಸರದಿ
ಬಳಿಕ ತಿದ್ದುವೆನೆನ್ನುತ.

ಮಹರಾಷ್ಟ್ರ ಮುಖುರವದು ಬಿಗಿದ ಮುತ್ತುಗಳಿಂದ
ಗಹಗಹಿಸಿ ಯಲುಗುತ್ತ ದೇವಿ ನಗಲು! ನಗಲು!
ಬಹು ಕೆಂಪಿನಾವೊಲೆ ತೆನುಗನ್ನು ಹೋಲುತಲಿ
ಮಿನುಗಿ ಮೃಗಶಿರನ ಹಳಿಯೆ!

ತಮಿಳು ಕಂಠಿಯ ಕೀಲನಮಿತ ಪ್ರೇಮದಲೊತ್ತಿ
ರಮಣಿ ಯುಳಿದಾಭರಣಗಳ ಧರಿಸೆ
ಉಡಿಗೆ ತೊಡಿಗೆಗಳೆಲ್ಲ ಪಡೆಯುತಿರೆ ತಿಳಿ ಹೊಳಪ
ಸಿರಿ ಮೈಯ ತೇಜದಿಂದ

ಸಿಂಗರವು ಮುಗಿಯಿತಿದು ಮುಂಬೆಳಗಿ ಬೆಳೆಯುತಿದೆ
ಅಂಗಾಂಗಳ ಕಾಂತಿ! ಇಂಬಾಯ್ತು ಉಡಿಗೆ ತೊಡಿಗೆ!
ಸಂಗಡಲೆ ತಿದ್ದುವೆನು ತಿಲಕವನು ಎನ್ನುತಲೆ
ಅರಸಿ! ರನ್ನ ಗನ್ನಡಿಯ!

ಬಲುದಿನದ ರತುನವಿದು ಚಿರಕಾಲವಾಯ್ತಿದನು
ತೆರೆದು ನೋಡಿಲ್ಲೆಂದು ಒಲಿದು ನೋಡುತ ರಮ್ಯೆ!
ಒರೆಸಿದಳು ಶರಗಲ್ಲಿ ಅಬ್ಬಬ ಬಲುಮಂಕು
ಮೊಬ್ಬಾಯ್ತು ಎನುತೆನುತಲೆ!

ಶರಗೆಳೆದು ಭಾರತಿಯು
ಒರೆಸುತ್ತ ನೋಡುತ್ತ
ಸಿರಿಗನಡಿ ಏತಕಿದು ಒಲಿಯದಿಹುದು!
ವರಪತಿಯ ಕಾಣಲಿಹೆ
ಸರಿ‌ಇಲ್ಲ! ಇದು ತಿಲಕ!
ಸಿರಿಗನಡ ವದನವನು ತೋರದಿಹುದು

ಚಿರದಿನದ ರತುನವಿದು
ಸಿರಿಗನಡ ಕನಡಿಯಿದು!
ಶೆರಗೆಳೆದು ಭಾರತಿಯು
ಒರೆಸುತ್ತ ನೋಡುತ್ತ!
ಸಿರಿಗನಡಿ! ಏತಕಿದು
ಮೊಗಛವಿಯ ತೋರದೆನುತ
ಹಿರಿಹೊಲಸ ನೊರಸುತ್ತ
ಮರುಗುತಿಹಳು!
ಮರು ಮರುಗುತಿಹಳು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪುಂಗಿ
Next post ಸತಿ ಹೋಗುವುದಿಲ್ಲ….

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

cheap jordans|wholesale air max|wholesale jordans|wholesale jewelry|wholesale jerseys