ಯಶೋಧರೆ…ಗೆ

ಏಕೆ ನೀನು ಮೌನ ವಹಿಸಿದೆ,
ಮಾತನೊಲ್ಲದ ಶಿಲ್ಪವಾದೆ
ಹೇಳೆ… ನೀ ಯಶೋಧರೆ?

ಯಾವ ಕಾರಣ,
ಯಾವ ಹೂರಣ,
ತೋರಣದಿ ನಡೆದಿತು ನಿನ್ನ ಹರಣ,

ಏನೋ ಅರ್ಥವ
ಹುಡುಕೋಗಣ್ಣಿಗೆ,
ತಿಳಿಯದಾಯಿತೆ ನಿನ್ನೊಲವ ಚರಣ,

ಸತ್ಯ ಶುದ್ಧ ಜೀವನ
ಬಾಳ ಬೆಸುಗೆಗೆ
ಅರ್ಥವಿರದವರಿಂದಲಿ ನೊಂದೆಯೊ?

ಕಣ್ಣ ಮುಂದಿನ
ಜಗವ ಕಾಣಲು ಬೋಧಿ ವೃಕ್ಷವಾಗಿ ರೂಪನು ತಳೆದೆಯೊ?

ಸಿದ್ಧ-ಅರ್ಥವಳಿದು
ಬುದ್ಧನಾದರೂ
ನಿನ್ನ ಶುದ್ಧ ಪ್ರೇಮಕೆ ತುಂಬಲಿಲ್ಲವೇ ನೇಸರ?

ನಾಳೆ ಕಾಣದ
ಕಣ್ಣ ನೋಟಕೆ…
ರಾಹುಲನೆಂದುದೇತಕೊ ಅಪಸ್ವರ

ನಿನ್ನ ಕಾವ್ಯವು
ನಿನ್ನದಲ್ಲದ ಭಾವದಲಿ
ಭಾರವಾಗಿದೆ.

ಇವಳಿಗಿಷ್ಟೇ ಸಾಕು
ಎನ್ನುವ ಕೂಪನಿಷ್ಠದಿ
ಎಲ್ಲೋ ಒಂದೆಡೆ ಸೊರಗಿದೆ…!

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭ್ರಮೆಯೆಂಬ ಸತ್ಯ
Next post ತುಂತುರು ಸೋನೆಯಲ್ಲೊಂದು ಪ್ರೇಮಕಥೆ..

ಸಣ್ಣ ಕತೆ

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

cheap jordans|wholesale air max|wholesale jordans|wholesale jewelry|wholesale jerseys