ಊರ್ಮಿಳೆ

ಕವಿಯ ಬರಹದಕ್ಷರದಲಿ
ನಿನ್ನ ಬಾಳಿನಕ್ಕರ ತೋರಲಾಗದು…
ಓ ಸೌಮಿತ್ರಾ ಪ್ರಿಯೆ ಊರ್ಮಿಳಾ…

ಎಲ್ಲೆ ಇರಲಿ, ಹೇಗೆ ಇರಲಿ
ಒಲಿದವಗೆ ಕೊರಳ ನೀಡಿದ ಚಿತ್ಕಳಾ
ಶಬ್ದಮೀರಿದ ನಿಃಶಬ್ಧದಲ್ಲಿ
ತವಸಿಯಾಗಿ ಸಾಗಿದೆ,
ಸಂಗ ತೊರೆದ ನಿಸ್ಸಂಗದಲ್ಲಿ
ಚೈತನ್ಯವಾಗಿ ಸೇರಿದೆ…,
ಇದ್ದು ಇರದಾ ನಂದನದಲಿ
ಸಿದ್ಧ ಸಾಧನೆ ಬಯಸಿದೆ….
ಕಣ್ಣರೆಪ್ಪೆಯಂಚಿನಲ್ಲಿ
ಇನಿಯನನಿಟ್ಟು ತೂಗಿದೆ,
ಮೇಘ ಸಾಲಿನ ಮಾಲೆಯಲ್ಲಿ
ಶ್ರೀ ಸಂದೇಶವ ಕೋರಿದೆ
ನೀನೇ ಧನ್ಯಳು, ನೀನೇ ಮಾನ್ಯಳು,
ನೀನೇ ಶೂನ್ಯದ ಬೆಳದಿಂಗಳು.

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೋಗಿ ನೋಡುವ ಬಾರೆ
Next post ಜಗತ್ತು ಬದಲಾತು

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

cheap jordans|wholesale air max|wholesale jordans|wholesale jewelry|wholesale jerseys