ಸತ್ಯ ಸೀಮೆಗೆ ತಾಯೆ ನಡಿಸೆನ್ನ

ಮಳೆ ಹನಿಯ ಬಿಡು ಹೂಗಳಲಿ, ಮರ
ಗಳ ಹಸುರು ಹಚ್ಚೆಯಲಿ, ಕಡಲಿನ
ಬಿಳಿ ನೊರೆಗಳಂಚಿನಲಿ ಮಿರುಗುವ ಸೀರೆಯನು ತಳೆದ,
ಹೊಳೆವ ಹೊಳೆಗಳ ಗಳದ ಸರದಲಿ
ಝಳದ ಹಿಮಗಿರಿಮಕುಟದಲ್ಲಿ ಥಳ
ಥಳೆವ ರಮಣಿಯೆ! ಜನ್ಮಧರಣಿಯೆ! ಭರತಭೂಮಣಿಯೇ!

ಹೊತ್ತಿಸಿದೆನೌ ಮುಂಚಿನಾಳಕೆ
ವೆತ್ತ ಬೀರರ ಪೂರ್ವದರಸರ
ಹೊತ್ತ ನಿನ್ನುದರವನು; ಧರ್ಮಾಮೃತದ ಬೋಧಕರ
ಹೆತ್ತ ನಿನ್ನೀಬಸುರು, ನನ್ನನು
ಹೆತ್ತು ಹಡೆಯಿತು ವಿಷವ; ಸೀಗೆಯ
ಬಿತ್ತು ಮೊಳೆತಂತಾಯ್ತು ಬಾಳೆಯ ಬುಡದಿ ನನ್ನಿಂದ!

ಕತ್ತಿವೀರರು ನಿನ್ನ ಹಗೆತಲೆ
ಯೊತ್ತಿ, ರಣದಲಿ ಜಯಿಸಿ, ಕುಂಕುಮ
ನೆತ್ತರಿನ ಬೊಟ್ಟಿಟ್ಟು ಶೌರ್ಯದ ಹಣೆಯ ನಡುವಿನಲಿ,
ಮತ್ತೆ ಕೀರ್ತಿಯ ಕಾಲ್ಗೆ ಗೆಜ್ಜೆಯ
ಸುತ್ತಿ ಬೆಳಗಿದ ನಿನ್ನ ಮುಖದಲಿ
ಬಿತ್ತು ನನ್ನೆದೆಯೊಳಗೆ ತುಂಬಿದ ಕತ್ತಲೆಯ ನೆರಳು.

ಮೆರೆದೆನೌ ಹೊಂಗೋಳ ಕೈಯಲಿ
ಮೆರೆದೆನೌ ಮಾಯೆಯಲಿ ಹೊಟ್ಟೆಯ
ಹೊರೆದೆನೌ, ನನ್ನೆಲುಬು ಮಾಂಸವ ನಾನೆ ಉಂಡುಂಡು!
ತೊರೆದೆನೌ ನನ್ನವರ ಮುಟ್ಟಿದೆ
ಒರೆದೆನೌ ಪರತಂತ್ರ ಪಾಠವ
ಬರೆದೆನೌ ನಿನ್ನಯ ಲಲಾಟದಿ ದಾಸ್ಯಮುದ್ರೆಯನು!

ಕದ್ದ ಕಳ್ಳನು ಕೆಡುಕನಾದರು
ಮುದ್ದು ಮಗನಲೆ ತಾಯಿಗಾತನ
ನೊದ್ದು ಬಿಡುವಳೆ? ತಾಯೆ! ನೋಡೌ ಕರುಣದಿಂದೀಗ!
ನಿದ್ದೆಯಿಂದೆಚ್ಚೆತ್ತೆ, ಹೋ! ಹೋ!
ತಿದ್ದಿಕೊಳ್ಳಲು ಹೊತ್ತಿದೇ! ನೀ
ನಿದ್ದು ಕೈಗೊಟ್ರೆನಗೆ ಕಲಿಸೌ ನಿನ್ನ ಸೇವೆಯನು!

ನನ್ನ ಹಸಿ ಮೈದೊಗಲ ಜೋಡನು
ನಿನ್ನಡಿಗೆ ಜೋಡಿಸುವೆ; ಗುಡಿಸುವೆ
ನನ್ನ ಕೂದಲ ಚೌರಿಯಲಿ ನಿನ್ನಡಿಯ ಧೂಳಿಯನು;
ನನ್ನ ಮನದಲ್ಲಿ ಹಿಡಿವೆ ನಿನ್ನನು!
ಇನ್ನು ಕುಳ್ಳಿರ್ದೀ ಮನೋರಥ
ವನ್ನು ಬೇಗನೆ ನೂಕಿ ನಡೆವೆನು ಸುಖವ ಮೇರುವಿಗೆ!

ಎಲ್ಲಿ ಸಾಹಸ ಸತ್ವದಳತೆಗೆ
ಬಳ್ಳವಾಗದೊ ಮೈಯ ಬಣ್ಣವು,
ಎಲ್ಲಿ ಅನ್ಯಾಯಕ್ಕೆ ಕತ್ತಿಯು ಕೊಡದೊ ಬೆಂಬಲವ,
ಎಲ್ಲಿ ಆತ್ಮೋನ್ನತಿಯ ಹಾದಿಗೆ
ಕಲ್ಲು ಮುಳ್ಳನ್ನಿಡಿರೊ, ಆ ಸುಖ
ಸಲ್ಲಲಿತ ಸಮ ಸತ್ಯ ಸೀಮೆಗೆ ತಾಯೆ ನಡಿಸೆನ್ನಾ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬುದ್ಧಿವಾದ
Next post ಕತ್ತಲಲ್ಲಿರುವವನು

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

cheap jordans|wholesale air max|wholesale jordans|wholesale jewelry|wholesale jerseys