ಅವರು ಮತ್ತು ನಾವು

ನಾವು ತಿನ್ನುವುದಕ್ಕೆ
ಅನ್ನ ಕೇಳಿದೆವು
ಅವರು ಹುಳ ಬಿದ್ದ
ಅಕ್ಕಿ ಕೊಟ್ಟರು
ನಾವು ಹುಳ ದೇವರಿಗೆ ಕೊಟ್ಟು
ಅಕ್ಕಿಯನ್ನು ಕಣ್ಣಿಗೊತ್ತಿಕೊಂಡು
ಅನ್ನ ಮಾಡಿ ಉಂಡೆವು!

ಈಗ
ಅವರು ತಿನ್ನುವ ಅನ್ನಕ್ಕೇ
ಹುಳ ಬಿದ್ದಿದೆ
ಅವರು ಹುಳುಗಳನ್ನು
ನಿಷ್ಕಾರುಣ್ಯವಾಗಿ ಕೊಂದುಬಿಟ್ಟು
ಅನ್ನಕ್ಕಾಗಿ ದೇವರಿಗೇ
ಕೈ ಚಾಚುತ್ತಿದ್ದಾರೆ!

ಸಾಯುವಾಗ
ನಾವು ಕುಡಿಯುವುದಕ್ಕೆ
ನೀರು ಕೇಳಿದೆವು
ಅವರು ಆಕಾಶದಲ್ಲಿ ನಿಂತು
ಪಾತಾಳಕ್ಕೆ ನೀರು ಸುರಿದರು
ಸುರಿದ ನೀರಲ್ಲಿ
ನಾವು ದಣಿವಾರಿಸಿಕೊಂಡು
ಉಳಿದ ನೀರಲ್ಲಿ
ಕಣ್ಣೀರ ತೊಳೆದುಕೊಂಡೆವು

ಈಗ
ಅವರಿಗೆ ಸಾಯುವಾಗ
ಬಾಯಲ್ಲಿ ನೀರು ಬಿಡುವವರಿಲ್ಲ
ಅವರು ಸಾಕಿ ಸಲಹಿದ ಮಕ್ಕಳು
ಆಕಾಶದಲ್ಲಿ ಹಾರಿ
ದೂರ ದೇಶ ಸೇರಿದ್ದಾರೆ
ಅವರ ನೆನಪಿನಲ್ಲಿಯೇ ಇವರು
ಕಣ್ಣೀರು ಸುರಿಸುತ್ತಾ
ಪಾತಾಳಕ್ಕೆ ಇಳಿದು ಹೋಗಿದ್ದಾರೆ!

ನಮಗೇನಾದರೂ ಕೊಡುತ್ತಲೇ
ನಮ್ಮಗಳ
ಜೀವ, ಮಾನ, ಪ್ರಾಣಗಳ
ಉಳಿಸಿದ ಅವರ
ನಾವು ಶಪಿಸುವುದೂ ತರವಲ್ಲ!
ಮಾನವನೆದೆ ಬರಡೇನಲ್ಲ
ಪ್ರೀತಿ ಪ್ರೇಮಗಳ
ದವಸ ತುಂಬಿದ ಕಣಜ
ಹಂಚಿ ಉಟ್ಟುಣ್ಣುವ
ಸುಖದ ನಿಜ
ತಿಳಿಯಬೇಕಿದೆ ಮನುಜ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಢಂಬ ಬದುಕಿನ ತುಂಬಾ
Next post ಎಲ್ಲಿದೆ ದಂಡೆ, ಯಾರನ್ನು ಕಂಡೆ?

ಸಣ್ಣ ಕತೆ

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys