೨೬-೧-೫೦

ತಲೆಯ ಮೇಲಿನ ಹೆಜ್ಜೆ ಎಂದೋ ತೆರಳಿತು
ಪಡುವಲಿನ ಬಿಳಿ ಕೆಂಪು ನೀಲಿ ನೀರನು ದಾಟಿ,
ಮರಕತ ದ್ವೀಪದಮನೆಗೆ. ದಣಿಗೂ ದಣಿವು!
ಇತ್ತ ಈ ಬಿಡುಗಡೆಯೂ ಮೈಮುರಿದು ಪರಶಿವನ
ತ್ರಿಶೂಲದಂತಾಯ್ತು ನೋಡುನ ಕಣ್ಣಿಗೆ!

ತಲೆಯ ಮೇಲಿನ ಹೆಜ್ಜೆ. -ಈ ಮಾತು ಮುಗಿಯಿತು;
‘ಹೆಜ್ಜೆಯೇ ಅಲ್ಲ ಮಕುಟದ ಮುತ್ತು ಅದು,
ಇರಲಿ ರಾಜತ್ವ ನೆಪಮಾತ್ರ’ ಎನುವಂತಿಲ್ಲ,-
ಮಕುಟ ರಹಿತ ಸಾಮ್ರಾಜ್ಞಿ ಭಾರತಲಕ್ಷ್ಮಿ,
ರಾಜತ್ವ ರಹಿತ ರಾಜ್ಯಾಂಗ ಮನೋಮಂದಿರೆ.

ನೆನೆ ನೆನೆ ಓ ಮನನೆ ನಿನ್ನ ಎದೆಗತ್ತಲೆಯೆ
ಬಲಿಗೊಟ್ಟ ತಂದೆ ಬಾಳಿನ ಚಂದ್ರಬಿಂಬವನು.
ಆ ನೋಟ ನಿನ್ನ ಕಣ್ಣಾಗಿ, ಅಮೃತವೆ ತುಂಬಿ,
ಗಾಂಧಿಜಿಯ ಮಂದಹಾಸವೆ ಗುರುವಾಗಲಿ !

ಬಾಂಬಿನ ಅಲಂಕಾರ ನಿನಗಿಲ್ಲ, ತಾಯೆ,
ಶಾಂತಿ ಪ್ರಿಯೆ, ಚಂದ್ರಕಾಂತಿ ಪ್ರಿಯೆ,
ಗಂಗಾ ಯಮುನಾ ನದನದೀ ಸ್ನಾತೆ,
ಉಪನಿಷದ್ವಿಪಿನ ಹೋಮಾಗ್ನಿ ಸಂಜಾತೆ !

ಚಳಿಗಾಲ ಬಂದಿರಲು, ಮುದುಕಿ ಮುಮ್ಮೂಲೆಯಲಿ
ಒಂದು ಕಿಡಿ ಕೆಂಡದೆದುರಿನಲಿ ಮೈ ಹಿಡಿಯಾಗಿ
ಬೆದರಿ ಕುಳಿತಂತೆ, ಚಿಂತೆಗೆ ಆತ್ಮನನು ತೆತ್ತು
ಸಂಗ್ರಾಮ ಭೀತಿಯಲಿ ಸೋತು ಸೊರಗಿ ಜಗತ್ತು
ದೂರ ಸಭೆಗಳಲಿ ಮುಗಿಯುವ ಮುನ್ನ ಎಚ್ಚರಿಸು.
ನಿನ್ನ ಗಂಭೀರವಾಣಿಯ ಪಾರಿವಾಳಗಳ
ಬೆಳ್ಗರಿಯ ಬೀಸಿ ಶಾಂತಿಯ ಶಿಶುವನುಪಚರಿಸು;
ಅದು ಬೆಳೆದು ಲೋಕನಾಯಕನಾಗಿ ರಾರಾಜಿಸಲಿ!

ಜಗಜ್ಜನನಿಯಲ್ಲ ನೀನು; ಜಗನ್ಮೋಹಿನಿಯೂ ಅಲ್ಲ;
ಜಗದ್ಧಾತ್ರಿಯಾಗಿರು ನೀನು; ಅಹಿಂಸಾವತ್ಸಲೆ,
ನಿನ್ನ ಶಾಸನವಿದು (ನಡೆ ನಗಾರಿಯ ಮೇಲೆ;
ಈ ಧರ್ಮ ನಿನ್ನ ಬಾವುಟದ ಇನ್ನೂ ಮೇಲೆ):

“ವಯಂ ಪುನಃ ಏವಂ ಆಚಕ್ಷಾಮಹೇ,
ಏನಂ ಭಾಷಾಮಹೇ, ಏವಂ ಪ್ರರೂಯಾಮಃ,
ಏವಂ ಪ್ರಜ್ಞಾಪಯಾಮಃ,-
ಸರ್ವೇ ಪ್ರಾಣಾಃ, ಸರ್ವೇ ಭೂತಾಃ, ಸರ್ವೇ ಜೀವಾಃ,
ಸರ್ವೇ ಸತ್ವಾಃ,
ನ ಹಂತಾವ್ಯಾಃ
ನ ಆಜ್ಞಾಪರಿಯಿತವ್ಯಾಃ
ನ ಪರಿಗ್ರಹೀತವ್ಯಾಃ
ನ ಪರಿತಾಪಯಿತವ್ಯಾಃ
ನ ಉಪದ್ರೋತವ್ಯಾಃ
ಆರ್ಯವಚನಮೇತತ್
ಓಂ ತತ್‍ಸತ್.”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ‘ಸೂಟ್‌ಕೇಸ್ ಸ್ಟೆಟಲಾನಾ’
Next post ಲಿಂಗಮ್ಮನ ವಚನಗಳು – ೬

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

cheap jordans|wholesale air max|wholesale jordans|wholesale jewelry|wholesale jerseys