ಸ್ಥಾವರ! ಜಂಗಮ?

ಅಂತರಂಗದ ಕದವ ತೆರೆಯಿಸೊ
ಅಂತರಾತ್ಮ ವಾಣಿಯನಾಲಿಸು
ಅಂತಕಾಂತನ ಕೃಪೆಯ ನೆಳಲಲಿ
ಚಿಂತಾತ್ಮನ ಕೊನೆಗಾಣಿಸು ||

ಚಿತ್ತ ಚಿತ್ತಾರ ಬಿತ್ತರ
ಬಣ್ಣ ಬದುಕಿನ ಕೆಡುಕಿಗೆ
ನೀನು ನಾನು ಎಲ್ಲರಿಲ್ಲಿ
ಮೃತ್ಯುಗೈಯಮಣ್ಣ ಬಿಂದಿಗೆ ||

ಬಿಸಿಲಗುದುರೆಯ ಸವಾರಿಯಲ್ಲಿ
ಸವೆಸಬಹುದೆ ಹಾದಿಯ
ಹುಸಿಹಂಬಲದ ನಾವೆಯಲ್ಲಿ
ಸೇರಬಹುದೆ ನಿಜ ತೀರವ ||

ಭಿತ್ತಿ ಭಿತ್ತಿಯು ಭೀತಿ ಬಲೆಯ
ಭಿತ್ತಿ ಬೆದರಿಸೂ ಸ್ಥಾವರ
ಆತ್ಮದಾನಂದದಾನಂದದ
ಜಂಗಮವಿಂದು ದುಸ್ಥರ ||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜಿ.ಎಸ್. ಶಿವರುದ್ರಪ್ಪನವರ ಕಾವ್ಯದಲ್ಲಿ ಸಾಮಾಜಿಕ ಸಾಮರಸ್ಯದ ಆಶಯಗಳು
Next post ಸ್ವಂತದ್ದಲ್ಲ

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

cheap jordans|wholesale air max|wholesale jordans|wholesale jewelry|wholesale jerseys