ಏನೇ ಬಂದರೂ

ಏನೇ ಬಂದರೂ ನೀ ದಯೆತೋರು
ನಿನ್ನಾ ದಯೆಯಲಿ ಬಾಳನು ನೀಡು |
ಬಾನಿಗೆ ರವಿಕಾಂತಿ ಶೋಭಿಸುವಂತೆ
ನನ್ನೀ ಬಾಳಿಗೆ ನೀ ಬೆಳಕಾಗು||ಕೃಷ್ಣಾ||

ಕಷ್ಟವೇ ಬರಲಿ, ಬದುಕಲಿ
ಕಾಳಿರುಳ ಕತ್ತಲೆ ಕವಿಯಲಿ|
ನಿನ್ನಾಕರುಣೆಯ ಕಿಡಿಯೊಂದಿರಲಿ
ಎದುರಿಸಿ ಜಯಿಸುವೆ ಕಠಿಣ ಸಂಕೋಲೆ||

ನಿಂತ ನೆಲವೆ ಕುಸಿಯಲಿ
ಜೀವವಿದು ಪಾತಾಳವನೇ ಸೇರಲಿ|
ನಿನ್ನಾಕರುಣೆಯ ಕರೆಯದು ಕೇಳೆ
ಜ್ವಾಲಾಮುಖಿಯಂತೆ ನೆಲಸೀಳಿ ಬರುವೆ||

ಬರವೇ ಬರಲಿ ಕ್ಷಾಮವೇ ಇರಲಿ
ಭೀಕರ ರೋಗವೇ ಬಳಲಿಸಿ ಬೇಯಿಸಲಿ|
ನಿನ್ನಾ ಅಭಯವು ಅರಳಿದ ಮರುಕ್ಷಣ
ನಾನುದ್ಭವಿಸುವೆ ಶಿಲ್ಪಕಲಾಮೂರ್ತಿಯಂತೆ
ಹೊಳೆಯುತಲಿ ಕಣಕಣ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮ್ಮ ಆರೋಗ್ಯದಲ್ಲಿ ವಿಟಮಿನ್ನುಗಳ ಪಾತ್ರವೇನು?
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೧೨೩

ಸಣ್ಣ ಕತೆ

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

cheap jordans|wholesale air max|wholesale jordans|wholesale jewelry|wholesale jerseys