ಏಕೆ ಹುಡುಕಲಿ ನಿನ್ನ?

ಏಕೆ ಹುಡುಕಲಿ ನಿನ್ನ?
ಜಗಜ್ಜಾಹೀರವಾಗಿರಲು ನೀನು|
ಏಕೆ ಕಾಣಿಸುವುದಿಲ್ಲವೆನ್ನಲಿ
ಸರ್ವವ್ಯಾಪಿಯಾಗಿರುವ ನಿನ್ನ|
ಅಣುರೇಣು ತೃಣಕಾಷ್ಟದಲಿ, ಎಲ್ಲಂದರಲ್ಲಿ
ಸರ್ವಾಂತರ್ಯಾಮಿಯಾದ ನಿನ್ನ||

ನಿನ್ನ ಒಂದು ಈ ಭೂ‌ಅರಮನೆಯಲಿ
ಗಾಳಿ, ನೀರು, ಬೆಳಕು
ಶಕ್ತಿಯಾಗಿ ನಿರಂತರ ಚಲಿಸುತಿರಲು|
ಎಂದೋ ಅತಿಥಿಯಾಗಿ
ಬಂದು ಹೋಗುವ ನಾನು
ನಿನ್ನ ಅರಿಯಲು ಸಾಧ್ಯವೇ||

ಅನಂತ ಶತಮಾನಗಳ ಹಿಂದೆ
ನೀ ಸೃಷ್ಟಿಸಿರುವ ನಿನ್ನ ಕುರುಹುಗಳ
ಸರಿಯಾಗಿ ಅರಿಯದಲೆ
ನಿನ್ನ ಅಲ್ಲಗಳೆವುದು ನ್ಯಾಯವೇ?
ನೀನಿತ್ತ ಮತಿಯ ಉಪಯೋಗಿಸಿ
ನಿನ್ನ ಪ್ರಶ್ನೆಮಾಡುವುದು ಸರಿಯೇ||

ಕುರುಡನೊಬ್ಬ ಆನೆಯ ಕಾಲ ಮುಟ್ಟಿ
ಅದು ಕಂಬದಂತಿದೆ ಎಂದಂತೆ
ಪರಿಕಲ್ಪಿಸುವುದು ಸರಿಯೇ?
ನಿನ್ನನರಿಲುಬೇಕು ಅಂತರಂಗದ ಕಣ್ಣು,
ಸತ್ಯವನರಿಯುವ ಕಣ್ಣು||

ಚಂದ್ರ, ಮಂಗಳನ ಮೇಲೆ ಕಾಲಿರುಸಿದಕೆ|
ತಂತ್ರಜ್ಞಾನದಿ ಹಕ್ಕಿಯಂದದಿ
ಹಾರಾಡುವುದ, ಪ್ರಾಣಿಯಂತೆ ನೀರಲಿ
ಚಲಿಸುವುದ ಕಲಿತಿದಕೆ,
ಅಂತರಿಕ್ಷದಲಿ ಸಂಚರಿಸುವುದ
ಅರಿತಿರುವುದಕೆ
ದೇವರಿಲ್ಲವೆಂಬುದು ತರವೇ?||

ಕೋಟ್ಯಾನು ಕೋಟಿ
ಜೀವ ಜಂಗುಳಿಯ ಸೃಷ್ಟಿಸಿ
ಅನ್ನಾದಿಗಳನಿತ್ತು ಸಲಹುವ
ಆ ದೈವವ ಅಪಮಾನಿಸುವುದು
ನ್ಯಾಯವೇ, ಧರ್ಮವೇ ? ||

ಬೇಡ, ಹೆತ್ತತಾಯಿಯನೇ
ಶಂಕಿಸಿಸುವುದು ದೂಷಿಸುವುದು|
ತಾಯಿ ಎದೆಹಾಲು ಕುಡಿದು
ಬೆಳೆದಾದ ಮೇಲೆ,
ಅದು ನಿನ್ನೆಯದೊ ಇಂದಿನದೊ
ಎಂಬ ರಾಜಕೀಯತೆ||

ನೀ ಚಲಿಸುತ್ತಿರುವುದು
ನಿನ್ನ ಶಕ್ತಿಯಿಂದ ಎನ್ನುವುದಾದರೆ!
ಈ ಭೂಮಿ, ಈ ಬ್ರಹ್ಮಾಂಡ
ಸಹಾಸ್ರಾರು ವರುಷ ನಿರಂತರ
ಹೀಗೆ ಸಾಗುತ್ತಿರುವುದು
ಆ ದೈವದಶಕ್ತಿ ಇರುವುದರಿಂದಲೇ|
ಅನ್ಯತಾ ಕಾಲಹರಣವ ಮಾಡದಲೆ
ಅನ್ಯರ ಮಾರ್ಗದಲಿ ತೊಡಕಾಗದೆ
ನೀ ಬಂದ ಕಾರ್ಯ ಮುಗಿಸುವುದೇ ಲೇಸು||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೂರ್ಯನ ವಿದ್ಯುತ್ ಆವೇಷ
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೧೨೭

ಸಣ್ಣ ಕತೆ

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

cheap jordans|wholesale air max|wholesale jordans|wholesale jewelry|wholesale jerseys