ಉಯಿಲು

ಕೊಡಬೇಡವೋ ಶಿವನೆ!
ಕೂಸು ಮುದ್ದ
ಲೋಕವೆಲ್ಲಾ ಬಂಜೆ ಅಂದ್ರೂ ಪರವಾಗಿಲ್ಲ
ತೀರಿ ಹೋಗಲಿ ನಮ್ಮ ತಲೆಗೆ ಎಲ್ಲಾ!

ಅವರು ಇವರು ಯಾರ ಮಾತು ಏಕೆ ?
ಅಪ್ಪ ಯಾರೋ ಗೊತ್ತಿಲ್ಲ
ಸಾಯೋತನಕ ಅಮ್ಮನನ್ನಾದರು ನೋಡಿಕೊಂಡಿರುವ
ಭಾಗ್ಯವೂ ನಮಗಿಲ್ಲ; ಕಾರಣ ನಾವು ದನಗಳು.

ಎಲ್ಲೋ ಹುಟ್ಟಿ
ಎಲ್ಲೆಲ್ಲೋ ಯಾರು ಯಾರಿಗೋ ದಾಸರಾಗಿ ಜೀವತೇದು
ಹೇಗೋ ಕಂತೆ ಒಗೆದು ಹೋಗುವ
ಪರ್ದೇಸಿ ಬದುಕು ಯಾರಿಗೆ ಬೇಕ್ರಿ ?

ಹುಟ್ಟಿನಿಂದಲೇ ಶುರು
ನಮ್ಮ ಗೋಳು ಬಾಳು
ತಲೆ-ಕಾಲು, ಬೆನ್ನು-ಬಾಲ, ಅಚ್ಚೆ-ಮಚ್ಚೆ, ಸುಳಿ-ಮೂಳೆ
ನಂಬಿಕೆಗೆ ತಕ್ಕನಾಗಿ ಇದ್ದರೆ ಮಾತ್ರ ಲೇಸು!

ಆರೈಕೆ ಮನಸ್ಸಿದ್ದಂಗೆ
ತಾಯಿ ಹಾಲು ರುಚಿಗೆ ಮಾತ್ರ
ಮೈಗತ್ತುತ್ತೋ ಇಲ್ಲವೋ ಹಾಕಿದ ಕಸಕಡ್ಡಿ ತಿಂದು
ಜೀವ ಹೊರೆಯಬೇಕು.

ಹಲ್ಲು ಮೂಡಿರದಿದ್ದರೂ ಮರುಕ ತೋರಿಸರು
ತುಸುವೇ ಬನಿಯಾಗಿದ್ದರು ಸಾಕು
ಎಲ್ಲಾ ತರದ ನೊಗಗಳು ಹೆಗಲಿಗೇರುತ್ವೆ
ಬಿದ್ದು ಹೋಗೋ ತನಕ ಇದು ಸಾಗೇ ಇರುತ್ತೆ.

ಬೇನೆ-ಬೇಸರಿಕೆ, ಸುಸ್ತು-ಸಂಕಟ
ದಾಹ, ಹಸಿವು ಏರು ಇಳಿವು ಲೆಕ್ಕಕ್ಕಿಲ್ಲ
ಭಾವನಿಕೆಗೆ ಅರ್ಹವಾಗಲು, ಪ್ರೀತಿ ವಿಶ್ವಾಸ
ಪಡೆಯಲು
ನಾವೇನು ಮನುಷ್ಯರೇನು ?

ದುಡ್ಡಿನಾಸೆಗೋ… ಷೋಕಿಗೋ…
ಇಲ್ಲ! ನಮ್ಮ ಕ್ಷಮತೆ ಕಡ್ಡಿಯಷ್ಟು ಕಡಿಮೆಯಾದರೂ
ಸಂತೆ, ಜಾತ್ರೆಗೆ ಅಟ್ಟಿಕೊಂಡು ಹೋಗಿ
ತೋಚಿದ ಬೆಲೆಗೆ ತೂರಿ ಬಿಡುವರು.

ಯಾರು ಇಟ್ಟುಕೊಳ್ಳರು ನಮ್ಮನ್ನ ಕೊನೆತನಕ
ಉದ್ದಕ್ಕೂ ಮಾರುತ್ತಾ ನಡೆವರು
ಆಯ್ಕೆಗೆ ಎಲ್ಲಿದೆ ಸ್ವಾತಂತ್ರ್ಯ ?
ಅನುಭವಿಸುವುದನ್ನು ಬಿಟ್ಟು.

ಬರಬಾರದ್ದೇನಾದರು ಬಂದೋ…
ಬರ್ಬರ ದುಡಿಮೆಯಲಿ ಘಾತ ಸಂಭವಿಸಿಯೋ…
ವ್ಯರ್ಥ! ಹೊರೆಯೆನಿಸಿದರೆ
ತಿನ್ನುವ ಜನರಿಗೆ ಕೊಟ್ಟು ಮನೆಮಂದಿಗೆಲ್ಲಾ ಕೆರ
ಹೊಲಿಸಿಕೊಳ್ಳುವರು.

ಇವರಲ್ಲಿ ಸತ್ತರೆಂತಿಟ್ಟುಕೊಳ್ಳಿ,
ಎಲ್ಲರೂ ಸೇರುವರು, ಇನ್ನಿಲ್ಲದ ನೇಮ ನಡೆಸುವರು
ತೊಳೆದು, ಸಿಂಗರಿಸಿ ಹೂಳುವರು, ಸುಡುವರು
ಪೂಜೆ ಮಾಡುವರು ಆಗಲೂ… ಅನಂತರವು…
ಭಯದಿಂದ.

ನಾವು ಸತ್ತರೆ ಬಹಳ ಜನ
ಬಿಸಾಕಿ ಬರುವರು ಬಯಲಲ್ಲಿ
ಪ್ರಾಣಿ, ಪಕ್ಷಿಗೆ ಆಹಾರ ಮಾಡಿ
ನಾವು ಬದುಕಿನಲಿ ಸಾವಿನಲಿ ಉಪಯುಕ್ತರು
ಆದರೂ ನಮಗೀ ಗತಿ ನೋಡಿ!

ಬಯಲ ಮಹಾಮನೆ ಕಟುಕರಂಗಡಿಯಲಿ
ಕೊರಡು, ಮಚ್ಚುಗಳ ಉನ್ಮತ್ತ ನರ್ತನಕೆ
ನವರಂಗವಾಗುವೆವು ನಾವು
ತುಂಡು, ತುಂಡಾಗಿ ರವಾನೆಯಾಗುವೆವು
ಬೇಯಲಿಕೆ
ಪದಾರ್ಥವಾಗಿ.

ಕೊಡಬೇಡವೋ ಶಿವನೇ! ಕೂಸು ಮುದ್ದ
ನಮ್ಮ ಕುಲ ಹುಟ್ಟೋದು ಬೇಡ
ಈ ಸಾವು ಸಾಯೋದು ಬೇಡ
ತೀರಿ ಹೋಗಲಿ ನಮ್ಮ ತಲೆಗೆ… ಎಲ್ಲಾ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

ಸಣ್ಣ ಕತೆ Previous post ಜೀತ
Next post ಎನಗ್ಯಾಕೆ ಕಾವ್ಯದ ಹಂಗು ?

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

cheap jordans|wholesale air max|wholesale jordans|wholesale jewelry|wholesale jerseys