ಕೀಟನ್ಯಾಯ

ತರು ಲತೆ ಗಂಡು ಹೆಣ್ಣಂತೆ
ಒಂದಕ್ಕೊಂದು
ಶೃಂಗಾರ, ಅವಶ್ಯಕವಲ್ಲವೆ !
ಅಪ್ಪಿದವು
ಸಂಸಾರ ಶುರುವಾಯಿತು.

ಬಳ್ಳಿ ಲಲನೆ
ನೆಲದೊಳಗೆ ಬೇರಿಳಿಸದೆ
ಪ್ರಿಯಕರ ತರುವಿನೊಳಗಿಳಿಸಿ
ನಖ ಶಿಖಾಂತ
ಆನಕೊಂಡಾದ ರೀತಿ
ಬಿಗಿದು ಸತ್ವ ಹೀರಿ ಹೀರಿ
ಬಲಿಯುವುದು; ವಿಜೃಂಭಿಸುವುದು.

ಹುಂಬ ತರು
ಮರ್ಯಾದೆ, ನಿಯಮಗಳಿಗಂಜಿ
ಬಿಡಲಾಗದೆ, ಕಟ್ಟಿಕೊಳ್ಳಲಾಗದೆ
ಒಳಗೊಳಗೆ ಒದ್ದಾಡಿ ಒದ್ದಾಡಿ
ಸತ್ತು ಹೋಗುವುದು.

ಕೀಟ ಜಗದ ಹೆಣ್ಣು
ಕೂಡಿದ ಇನಿಯನನ್ನೆ
ತಿಂದು ಮುಗಿಸಿ ಬಿಡುವುದೆಂದರೆ
ಇಲ್ಲೂನು… ಅದೇ ನಡೆಯುತ್ತಾ !
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿರಾಳ
Next post ಮನೆ ಸ್ವಂತ ಪರಿಶ್ರಮದೊಳಾದರೆ ಅಷ್ಟೇ ಸಾಲದೇ ?

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

cheap jordans|wholesale air max|wholesale jordans|wholesale jewelry|wholesale jerseys