ಪ್ರೀತಿಗೆ

ಮಾತು ಬಲ್ಲವರಲ್ಲಿ ಕೇಳಿದೆ
ಅರ್ಥವಾವುದು `ಪ್ರೀತಿಗೆ’…..
ಮಾತ-ಮಾತಿಗೆ ನಿಲುಕಲಾಗದ
ಮೌನದಳವಿನ ರೀತಿಗೆ
ಬರೆದೆ ಬರೆದರು `ಪ್ರೀತಿ’ಸುತ್ತಲು
ಭಾಷೆ-ಭಾಷ್ಯವ ಬಗೆ… ಬಗೆ
ಇನ್ನೂ ಬರೆವರ ಸಾಲ ಕಂಡು
ಮನದಿ ಹೊಮ್ಮಿತು ಚಿರುನಗೆ….
ಎಲ್ಲೆ ಹೋದರು…. ಎಲ್ಲೆ ಕಂಡರು
ಅಲ್ಲಿ ಪ್ರೀತಿಯ ಸೆಲೆ ಇದೆ
ಮರಳುಗಾಡಲೂ ನಗುತ ಬಾಳುವ
ಜೀವ್ಯ ಜಾಲದೆ ಬಲವಿದೆ….
ದಿಗಂತದಲ್ಲಿನ ಪ್ರೀತಿ ಛಾಯೆಯು
ಇಳೆಗೆ, ದಿನವನು ನೀಡಿದೆ…..
ಇಳೆಯ ಕಣದಲಿ ಮೊಳೆವ ಪ್ರೀತಿಯು
ಬಾನ ಮೆರುಗಿಗೆ ಕಾದಿದೆ…..
ಮನ-ಮನದಾಳದರಮನೆ
ಪ್ರೀತಿಯಾ ಸಿರಿ ನಂದನ…..
ಅರ್ಥ ಮೀರಿದ ಸಾರ್ಥಕತೆಯ
ಒಲವಿನೈಸಿರಿ ಚೇತನ…..

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೬
Next post ಯಲ್ಡಕ್ಕೆ ಹೋಗದೆಲ್ಲಿ? (ಬೀದಿ ನಾಟಕದ ಹಾಡು)

ಸಣ್ಣ ಕತೆ

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

cheap jordans|wholesale air max|wholesale jordans|wholesale jewelry|wholesale jerseys