ಕಾಲು ದಾರಿಯೆ ಸಾಕು…

ಹಸಿವಾಯಿತು
ಶರಣಾದೆ ಮರಗಳಿಗೆ

ಬಾಯಾರಿತು
ತಲೆಬಾಗಿದೆ ನದಿಗಳಿಗೆ
ಮನಸೊಪ್ಪಿತು
ಸುಲಿಪಲ್ಲ ಗೊರವಂಗೆ ಒಲಿದೆ

ಗಿರಿಗಳಿಗೆ ಗವಿಗಳಿಗೆ
ಗಿಳಿ ಕೋಗಿಲೆ ನವಿಲುಗಳಿಗೆ
ಮಂದ ಮಾರುತಗಳಿಗೆ
ಕೈಯ ಮುಗಿದೆ

ನಡೆವವಳಿಗೆ ನುಡಿಯ ಹಂಗೇಕೆ?
ಕಡೆಯ ನುಡಿಯನೂ ಕೊಡವಿ
…ಮುನ್ನಡೆದೆ

ಕೂಡಿ ಬಂದಿರಲು ಗಳಿಗೆ
ಕಾಲು ದಾರಿಯೆ ಸಾಕು
ಕರೆದೊಯ್ಯಲು ಕದಳಿಗೆ…

ಇದನರಿಯದಿಹನೆ
ಚೆನ್ನಮಲ್ಲಿಕಾರ್‍ಜುನ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಸ್ಸಂಜೆಯ ಮಿಂಚು – ೨
Next post ಪರಿತಾಪ

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

cheap jordans|wholesale air max|wholesale jordans|wholesale jewelry|wholesale jerseys