ಕಟುಕ

ಅವನೊಬ್ಬ ಕಟುಕ, ಮಾಂಸವನ್ನು ಕತ್ತರಿಸಿ ಅಂಗಡಿಯಲ್ಲಿ ತೂಗಿಹಾಕಿ ಮಾರಾಟ ಮಾಡುತ್ತಿದ್ದ. ಅವನು ಮರದ ಹಲಗೆಯ ಮೇಲೆ ಪ್ರಾಣಿಗಳ ಇಡೀ ದೇಹವನ್ನು ಕತ್ತರಿಸುವಾಗ ಅವನ ಹೃದಯ ಸ್ಪಂದಿಸುತ್ತಿರಲಿಲ್ಲ. ಒಮ್ಮೆ ಅವನ ಬೆರಳಿಗೆ ಕತ್ತಿ ಬಿದ್ದು ಬೆರಳು ತುಂಡಾಗಿ ರಕ್ತ ಸುರಿಯಿತು. ಅವನಿಗೆ ಪ್ರಾಣ ಹೋದಂತಾಗಿ ನೋವಿನ ಅರಿವಾಯಿತು. ಮರದ ಹಲಗೆಯ ಮೇಲೆ ತುಂಡರಿಸಿದ್ದ ಪ್ರಾಣಿಯ ಬಾಯಿ ಮಾತನಾಡಲು ಬಾಯಿ ತೆರದಂತೆನಿಸಿತು. ಅವನು ಕತ್ತಿ ಮಚ್ಚನ್ನು ಹೂಳಿಟ್ಟು ಬೇರೆ ವೃತ್ತಿಯನ್ನು ಹುಡುಕಿ ಹೊರಟ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಬ್ಬಲಿ ಮಗು
Next post ಕಾಳ ರಾತ್ರಿ ಚೋಳ ರಾತ್ರಿ

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

cheap jordans|wholesale air max|wholesale jordans|wholesale jewelry|wholesale jerseys