ಪ್ರಾಮಾಣಿಕ ಅನಿಸಿಕೆ

ಸಂಜೆ ಸಮಯ.

ಅವನು ಒಳಗೆ ಬಂದ. ತನ್ನ ಮಾದಕ ನೋಟದಿಂದ ಅವಳು ಅವನನ್ನು ಬಾಗಿಲಲ್ಲಿಯೇ ಸ್ವಾಗತಿಸಿದಳು. ಅವಳ ಲಿಪ್‌ಸ್ಟಿಕ್ ತುಟಿ, ಪೌಡರ್‍ ಮೆತ್ತಿದ ಕೆನ್ನೆಯ ಗುಳಿ ಅವನನ್ನು ರೋಮಾಂಚನಗೊಳಿಸಿದವು. ಆಕೆಯ ತುರುಬು ಶೃಂಗರಿಸಿದ್ದ ಮಲ್ಲಿಗೆಯ ಗಜರಾವನ್ನು ಅವನು ಮೂಸಿದ.

ಪಲ್ಲಂಗದ ಮೇಲೆ ಕುಳಿತುಕೊಳ್ಳುತ್ತ ಅವಳನ್ನು ಬರಸೆಳೆದು ತಬ್ಬಿಕೊಂಡು ಇಡೀ ಮೈಯನನ್ನು ಮುದ್ದಿಸತೊಡಗಿದ. ಅವನೊಂದಿಗೆ ಅವಳೂ ತೀವ್ರವಾಗಿ ಸ್ಪಂದಿಸತೊಡಗಿದಳು.

ಅವಳ ದೇಹ ಸೊಬಗಿಗೆ ಸಂಪೂರ್ಣ ಸೋತುಹೋದ ಅವನು ಉತ್ಕಟವಾಗಿ ಉಲಿತ “ನೀನಿಲ್ಲದ ಪ್ರತಿಯೊಂದು ಕ್ಷಣಗಳು ನನಗೆ ಶೂನ್ಯ.”

“ನನಗೂ ಅಷ್ಟೆ” ಆಕೆ ಮೋಹಕವಾಗಿ ಪ್ರತಿಕ್ರಿಯಿಸಿದಳು.

“ನನ್ನ ನಿನ್ನ ಸಂಬಂಧ ಜನ್ಮಾಂತರದ್ದು ಅನಿಸುವುದು.”

“ಹೌದು”.

“ನನ್ನ ಹೆಂಡತಿಯಲ್ಲಿ ಇಲ್ಲದ ಆಕರ್ಷಣೆ ನಿನ್ನಲ್ಲಿದೆ.”

“ಎಲ್ಲರೂ ಹಾಗೆ ಹೇಳುವರು.”

“ಎಲ್ಲರಂತಲ್ಲ ನಾನು. ನಿನ್ನನ್ನು ತುಂಬಾ ಇಷ್ಟಪಡುತ್ತೇನೆ.”

“ನಾನೂ ಅಷ್ಟೇ.”

“ನಿನಗಾಗಿ ನನ್ನ ಹೆಂಡತಿಯನ್ನು ಬಿಡುತ್ತೇನೆ ನಾನು.”

“ಏಕೆ?”

“ನನ್ನೆದೆಯಲ್ಲಿ ನೀನು ಹೆಪ್ಪುಗಟ್ಟಿರುವೆ.”

ಆಕೆ ಮಾತನಾಡದೆ ಅವನೆದೆಯ ಮೇಲೆ ಒರಗಿ ತನ್ನ ಕಣ್ಣು ರೆಪ್ಪೆ ಪಿಳುಕಿಸಿದಳು.

“ನಾನು ನಿನ್ನನ್ನು ಬಹಳ ಪ್ರೀತಿಸುತ್ತೇನೆ.”

ಅವಳು ಉತ್ಸಾಹದಿಂದ ಕೆನ್ನೆ ಕುಣಿಸಿ ನಕ್ಕಳು.

“ನೀನು…..?” ಅವನು ಕೇಳಿದ.

“ನಾನು ನಿನ್ನ ಹಾಗೆ ಸುಳ್ಳು ಹೇಳುವುದಿಲ್ಲ” ಆಕೆ ಎದ್ದು ಕುಳಿತಳು.

“ಅಂದರೆ….?” ಗಲಿಬಿಲಿಯಾಗಿ ಕೇಳಿದ ಅವನು.

“ನಾನು ನಿನ್ನ ಹಣವನ್ನು ಪ್ರೀತಿಸುತ್ತೇನೆ” ಎದೆಯ ಮಾತು ಹೇಳಿದಳಾಕೆ.

ಆಕಾಶದಿಂದ ಬಿದ್ದವನಂತೆ ತತ್ತರಿಸಿದ ಅವನು ಭ್ರಮೆಯ ಪದರುಗಳಿಂದ ಹೊರಬಂದಂತೆ ಕಣ್ಣು ಹಿಗ್ಗಿಸಿ ಹೇಳಿದ “ನೀನು ಪಕ್ಕಾ ವೇಶ್ಯೆ!”

“ಅದು ಜಗತ್ತಿಗೆ ಗೊತ್ತು” ಎಂದಾಕೆ ಅವನು ಮೂಸಿದ ಗಜರಾ ಕಿತ್ತೆಸೆದು ಬಾಗಿಲಿನತ್ತ ಒಗೆದಳು.

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೪೨
Next post ಕ್ಯಾಬಿನ್ ನಂ.೬

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

cheap jordans|wholesale air max|wholesale jordans|wholesale jewelry|wholesale jerseys