ಹಸಿರು ಬಳೆಯ ಹೊಗರು ಕಳೆಯ

ಹಸಿರು ಬಳೆಯ ಹೊಗರು ಕಳೆಯ
ಚಂದ್ರ ಚಲುವ ಮೋಹಿನಿ
ಹೂವು ಮುಡಿಯ ಹಾವು ಜಡೆಯ
ಕೂಹು ಕೂಹು ಕಾಮಿನಿ ||೧||

ನೀನೆ ವೀಣೆ ನೀನೆ ಮೇಣೆ
ನೀನೆ ನೀನೆ ಕೋಮಲೆ
ತನನ ತನನ ಮನನ ಮನನ
ಕಾವ್ಯ ಮಾಲೆ ಊರ್ಮಿಳೆ ||೨||

ಯಾವ ಕನಸು ಯಾವ ಮನಸು
ತುಂಬಿ ತುಂಬಿ ತುಳುಕಿದೆ
ಕಾಲ ಕಾಲ ಕೂಗಿ ಕೂಗಿ
ತೂಗಿ ತೂಗಿ ಬೆಳೆದಿದೆ ||೩||

ನಿಲ್ಲು ಸಾಕು ಹುಲ್ಲು ಹಾವು
ವಿಶ್ವ ನಟನ ನಾಟಕಂ
ಹಳೆಯ ಧಾಟಿ ಘಾಟಿ ಫಾಟಿ
ತಗೋ ಮುಗಿಲ ರೂಪಕಂ ||೪||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೆರಳು
Next post ಕನ್ನಡ ಪಠ್ಯದಲ್ಲಿನ ದೋಷ ತಿದ್ದುಪಡಿಗೆ ಸಹಾಯಮಾಡಿ

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

cheap jordans|wholesale air max|wholesale jordans|wholesale jewelry|wholesale jerseys