ಕದನ ವಿರಾಮದ ಮಾತು

ಹಣ್ಣು ತಿನ್ನುವುದಿರಲಿ ನಿನ್ನ ಸ್ನೇಹಕ್ಕೆ ಸೋತು
ಮಣ್ಣು ತಿಂದೇನು ಅಂದಿದ್ದೆ, ಅಲ್ಲವ ಹೇಳು?
ಅಂದಿದ್ದೆ ಹೌದು ಒಂದಾನೊಂದು ಕಾಲದಲಿ
ಬುದ್ದಿಯಿದ್ದದ್ದೆಲ್ಲ ಆಗಿನ್ನು ಬಾಲದಲಿ

ಕೈಯಾರೆ ಬೆಳೆಸಿದ್ದ ಚಂದ್ರ ಹಲಸಿನ ಗಿಡ
ಬುಡಕ್ಕೆ ಗೆದ್ದಲು ಹಿಡಿದು
ಒಲೆಗೆ ಬಿದ್ದಿದೆ ಈಗ ಇದ್ದಿಲಾಗುತ್ತ,
ಹೂಬಿಟ್ಟ ಸ್ನೇಹ ಛೂಬಿಟ್ಟ ನಾಯಾಗಿ
ಹಾರಿ ಬರುತಿದೆ ಮೇಲೆ ಜೋರು ಬೊಗಳುತ್ತ

ಸತ್ತ ಗಾಯದ ಕಲೆಯ ಸಂತೈಕೆ ಅಳಿಸೀತ?
ಎಷ್ಟು ಆರೈಕೆ ಮಾಡಿದರೇನು ಎದೆಯಲ್ಲಿ
ಸಾಕಿ ದೊಡ್ಡ ತುಪಾಕಿ?
ಎಷ್ಟು ಕುದಿಸಿದರೇನು ಸಾರನ್ನು
ಎಸರಿಗೆ ಮೊದಲು ಉಪ್ಪು ಹಾಕಿ?
ಹಾಲು ಬತ್ತಿದ ಮೇಲೂ ಕೆಚ್ಚಲನ್ನ ಹಿಂಡಿ
ನೆತ್ತರನು ತೆಗೆಯುವುದು ಸಾಕು.
ವ್ಯಾಘ್ರನಖ ಹಾಕಿ ತೋಳಲ್ಲಿ ತೋಳವ ಸಾಕಿ
ಅಪ್ಪಿಕೊಳ್ಳುವುದಂತೆ ಈಗ!
ಅದೇನು ಒಪ್ಪಂದಕ್ಕೆ ಸಹಿ ಹಾಕಿದೆವಂತ
ಒದೆಸಿಕೊಂಡು ನಗುತ್ತಿರಬೇಕ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಗಿಯಲಾರದ ದುಃಖಕೆ
Next post ಶೋಕಗೀತೆ

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

cheap jordans|wholesale air max|wholesale jordans|wholesale jewelry|wholesale jerseys