ಮರಿ ಪಿಶಾಚಿ ಪದ್ಯ

ಭಾಗ-೧

ಒಮ್ಮೆ ಒಂದು ಮರಿಪಿಶಾಚಿ
ಊರ ಸುತ್ತಲದಕೆ ತೋಚಿ

ಪೊಟರೆಯಿಂದ ಇಳಿಯಿತು
ಧೈರ್ಯದಿಂದ ನಡೆಯಿತು

ನಡೆದು ನಡೆದು ಬರಲು ಕೊನೆ
ಬಿತ್ತು ಕಣ್ಣಿಗೊಂದು ಮನೆ

ಬಾಗಿಲಿಗೆ ಬೀಗವಿತ್ತು
ಕಿಟಕಿ ಮಾತ್ರ ತೆರದೆ ಇತ್ತು

ಅರೆ! ಎಂದು ಮರಿಪಿಶಾಚಿ
ಇಣುಕಿತಲ್ಲಿ ಕತ್ತು ಚಾಚಿ

ಯಾರು ಇಲ್ಲ ಮನೆಯ ಒಳಗೆ
ಹೋಗಿರುವರು ಎಲ್ಲೋ ಹೊರಗೆ

ಎಷ್ಟಾದರೂ ಪಿಶಾಚಿ ತಾನೆ
ಹಾರಿಯೇ ಬಿಟ್ಟಿತು ಧುಡುಕ್ಕನೆ

ಕುರ್ಚಿ ಮೇಜು ತೂಗುಯ್ಯಾಲೆ
ಕುಣಿದಾಡಿತು ಕೆಳಗೆ ಮೇಲೆ

ಮೂಗಿಗೆ ಬಡಿಯಲು ಏನೋ ವಾಸನೆ
ಹೊಕ್ಕು ನೋಡಿತು ಅಡುಗೆ ಕೋಣೆ

ಮೂಲೆಯಲೊಂದು ಒಂಟೆ ಡುಬ್ಬ
ಕವಚಿದ ಹಾಗೆ ಬೆಲ್ಲದ ಡಬ್ಬ

ಅರೆ! ಎಂದು ಮರಿಪಿಶಾಚಿ
ಇಣುಕಿತಲ್ಲಿ ಕತ್ತು ಚಾಚಿ

ಬೆಲ್ಲದ ಪಸೆ ಮೈ ಕೈ ಸವರಿ
ಬಿದ್ದೇಬಿಟ್ಟಿತು ಒಳಕ್ಕೆ ಜಾರಿ

ಮೇಲೆ ನೆಗೆಯೋಕಾಗೋದಿಲ್ಲ
ಉಂಡೆ ಬೆಲ್ಲ ಸುತ್ತಲೆಲ್ಲ

ಸರಿ! ಎಂದು ಮರಿಪಿಶಾಚಿ
ಮೆಲ್ಲತೊಡಗಿತು ಬಾಚಿ ಬಾಚಿ

ಮೆದ್ದು ಕೈ ಕಾಲು ಮಂಡೆ
ಆಯಿತೊಂದು ಬೆಲ್ಲದುಂಡೆ

ಅಷ್ಟರಲಿ ಸದ್ದು ಹೊರಗೆ
ಬಾಗಿಲು ಕಿರ್ರನೆ ತೆರೆದ ಹಾಗೆ

ಮನುಷ್ಯರ ಕಾಲ ಸಪ್ಪಳ
ಮುರಿದ ಹಾಗೆ ಹಪ್ಪಳ

ಮರಿ ಪಿಶಾಚಿ ಡಬ್ಬದೊಳಗೆ
ಬೆವರತೊಡಗಿತು ಮೆಲ್ಲಗೆ

ಭಾಗ-೨

ಅಡುಗೆ ಭಟ್ಟ ಸುಬ್ಬಾಭಟ್ಟ
ಒಲೆಯ ಮೇಲೆ ಎಸರನಿಟ್ಟ

ಅಂದು ರಾಮನವಮಿ ದಿವಸ
ಆದ್ದರಿಂದ ಪಾಯಸ

ಎಸರು ಕುದಿಯಿತು ತಳಮಳ
ಪಿಶಾಚಿಗೇಕೊ ಕಳವಳ

ಸುಬ್ಬಾಭಟ್ಟ ಹುಡುಕಿದ
ಬೆಲ್ಲದ ಡಬ್ಬ ತಡಕಿದ

ಕೈಗೆ ಸಿಕ್ಕ ದೊಡ್ಡ ಉಂಡೆ
ಸೇರಿತು ಪಾಯಸದ ಹಂಡೆ

ನೋಡಲೇನು! ಮರಿಪಿಶಾಚಿ
ಕುಂಯ್ಯೋ ಮುರ್ರೋ ಎಂದು ಕಿರುಚಿ

ಕಿಟಕಿಯಿಂದ ಒಂದೇ ನೆಗೆತ
ಬೇಡಿ ತಿನುವೆನೆನ್ನುತ

ಕೆಳಗೆ ಬಿದ್ದ ಸುಬ್ಬಾಭಟ್ಟ
ಒಂದು ವಾರ ಮಲಗಿಬಿಟ್ಟ

ಆಗಿದ್ದಾನೆ ಸಣಕಲು
ಹೇಳುತ್ತಾನೆ ಈಗಲೂ

ಇಂಥ ವಿಚಿತ್ರ ಕಂಡದ್ದಿಲ್ಲ
ಹಾರುವಂಥ ಉಂಡೆ ಬೆಲ್ಲ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೆಲದ ಕಣ್ಣು
Next post ಬದುಕು

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

cheap jordans|wholesale air max|wholesale jordans|wholesale jewelry|wholesale jerseys