ಮಿಸ್ಟರ್ ಕಾಗಿಟೋ ನರಕದ ಬಗ್ಗೆ ಹೀಗೆಂದುಕೊಳ್ಳುತ್ತಾನೆ

ನರಕದ ತಳಾತಳದಲ್ಲಿರುವ ಸೀಮೆ. ಎಲ್ಲರೂ ಅಂದುಕೊಂಡಂತೆ ಅಲ್ಲಿ
ನಿರಂಕುಶಾಧಿಕಾರಿಗಳಿಲ್ಲ. ಮಾತೃಹಂತಕರು, ಮಾತೃಗಾಮಿಗಳು, ಹೆಣಗಳನ್ನು ದರದರ
ಎಳೆದಾಡಿದವರು, ದೇಶದ್ರೋಹಿಗಳು ಯಾರೂ ಇಲ್ಲ. ನರಕದ ತಳಾತಳ ಕಾಲವಿದರ
ಆಶ್ರಯತಾಣ, ಎಲ್ಲೆಲ್ಲೂ ಕನ್ನಡಿಗಳು, ಸಂಗೀತ ವಾದ್ಯಗಳು, ವರ್ಣಚಿತ್ರಗಳು. ಸುಮ್ಮನೆ
ನೋಡಿದರೆ ಇದು ನರಕದ ಡಿಲಕ್ಸ್ ಡಿಪಾರ್ಟ್ಮೆಂಟು ಅನ್ನಿಸುತ್ತದೆ; ಕುದಿಯುವ ಎಣ್ಣೆ
ಕೊಪ್ಪರಿಗೆ ಇಲ್ಲ. ಮೈ ಕೊಯ್ಯುವ ಗರಗಸವಿಲ್ಲ. ಧಗಧಗ ಉರಿಯುವ ಬೆಂಕಿ
ನಾಲಗೆಗಳಿಲ್ಲ.
ವರ್‍ಷ ಪೂರ್ತಿ ಕಾವ್ಯ ಸ್ಪರ್ಧೆ, ಸಂಗೀತೋತ್ಸವ, ಕಲಾ ಮೇಳಗಳೇ. ಇವಕ್ಕೆ ಕ್ಲೈಮಾಕ್ಸ್
ಎಂಬುದಿಲ್ಲ. ಶಾಶ್ವತವಾಗಿ, ಬಹುಮಟ್ಟಿಗೆ ಅನಂತವಾಗಿ ಅಖಂಡವಾದ ಕ್ಲೈಮಾಕ್ಸೇ
ಯಾವಾಗಲೂ. ತಿಂಗಳಿಗೊಂದು ಹೊಸ ಪಂಥ, ಹೊಸ ಶೈಲಿಯ ಅವಿಷ್ಕಾರ.
ಅಗ್ರಗಾಮಿ ಕವಿ ಕಲಾವಿದರ ಮುನ್ನೆಡೆಯನ್ನು ತಡೆಯುವವರೇ ಇಲ್ಲ.
ನರಕದೊಡೆಯ ಬೇಲ್ಸೆಬಬ್‍ನಿಗೆ ಕಲೆಯನ್ನು ಕಂಡರೆ ತುಂಬ ಪ್ರೀತಿ. ನರಕದ ಮೇಳ,
ನರಕದ ಕವಿಗಳು, ನರಕದ ಸಂಗೀತಗಾರರು ಇವರೆಲ್ಲ ಸ್ವರ್ಗದಲ್ಲಿರುವ ಇಂಥವರಿಗಿಂತ
ತುಂಬ
ಅತ್ಯುತ್ತಮ ಎಂದು ಜಂಬಕೊಚ್ಚಿಕೊಳ್ಳಲು ಶುರುಮಾಡಿದ್ದಾನೆ. ಅತ್ಯುತ್ತಮ ಕಲೆ ಇದ್ದರೆ
ಅತ್ಕುತ್ತಮ ಸರ್ಕಾರವಿರುತ್ತದೆ. ಸತ್ಯ, ಪರಮ ಸತ್ಯ. ಸದ್ಯದಲ್ಲೆ ನರಕದ ಕಲಾವಿದರಿಗೂ
ಸ್ವರ್ಗದವರಿಗೂ ನಡುವೆ ಒಂದು ಸ್ಪರ್ಧೆ ಇದೆ, ಎರಡು ವಿಶ್ವಗಳ ಮಹಾ ಸರ್ಧೆ.
ಡಾಂಟೆ, ಫ್ರಾ ಏಂಜಲಿಕೋ, ಬಾಖ್ ಎಷ್ಟು ಮಟ್ಟಿಗೆ ಉಳಿದುಕೊಳ್ಳುತಾರೋ ನೋಡಬೇಕು.
ನರಕದೊಡೆಯ ಕಲೆಗೆ ಸಾಹಿತ್ಯಕ್ಕೆ ತುಂಬ ಪ್ರೋತ್ಸಾಹ ಕೊಡುತ್ತಾನೆ. ಕಲಾವಿದರಿಗೆ
ಶಾಂತಿ, ಅತ್ಯುತ್ತಮ ಆಹಾರ, ನರಕದ ಬದುಕಿನ ತಳಮಳ ತಾಗದಂಥ ಪ್ರತ್ಯೇಕ ಪರಿಪೂರ್ಣ
ಏಕಾಂತ ಒದಗಿಸಿದ್ದಾನೆ.
*****
ಮೂಲ: ಝ್ಬಿಗ್ನ್ಯೂ ಹರ್‍ಬರ್‍ಟ್ / Zbigniew Herbert

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎನ್ನ ಕಾಯೋ
Next post ವಾತಾಪಿ ಜೀರ್ಣೋಭವ

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

cheap jordans|wholesale air max|wholesale jordans|wholesale jewelry|wholesale jerseys