ಏಕಾಂತ

ಏಕಾಂತವು ಮಳೆಯಂತೆ.
ಸಂಜೆ ಹೊತ್ತಿನಲ್ಲಿ ಸಮುದ್ರದ ಕಡೆಯಿಂದ ನಮ್ಮ ಭೇಟಿಗೆ ಬರುವುದು.
ದೂರ ತುಂಬ ದೂರದ ಬಯಲಲ್ಲಿ ಹಬೆಯಾಗಿ ಆಕಾಶಕ್ಕೇರುವುದು,
ಏರುವುದು ತನ್ನ ಹಕ್ಕು ಅನ್ನುವಂತೆ.
ಅಲ್ಲಿಂದ ಬಂದು ಊರಿನ ಮೇಲೆ ಸುರಿಯುವುದು.
ಮಬ್ಬು ಕತ್ತಲ ವೇಳೆಯಲ್ಲಿ
ಊರ ಬೀದಿಗಳೆಲ್ಲ ಮುಂಜಾವಿನತ್ತ ತಿರುಗಿರುವಾಗ,
ಬಯಸಿದಾಸೆಗಳೆಲ್ಲ ತೀರಿಹೋಗಿ ಮೈಗಳೆಲ್ಲ
ದುಃಖದಲ್ಲಿ ಒಂಟಿಯಾಗಿರುವಾಗ,
ಒಬ್ಬರನ್ನೊಬ್ಬರು ದ್ವೇಷಿಸುವ ಮನುಷ್ಯರೆಲ್ಲ
ಅದೇ ಹಾಸುಗೆಯಲ್ಲಿ ನಿದ್ದೆಯಲ್ಲಿ ಅವಿತಿರುವಾಗ.
ಏಕಾಂತ ನದಿಯತ್ತ ಹರಿದುಹೋಗುವುದು.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹರಿಚರಣ ರತನ
Next post ಮಾಗಿಯ ಚಳಿಗೆ ಕವಿತೆ ಕಂಬಳಿ

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

cheap jordans|wholesale air max|wholesale jordans|wholesale jewelry|wholesale jerseys