ಬುದ್ಧ ವೈಭವ

ಎಲ್ಲ ಕೇಂದ್ರಗಳ ಕೇಂದ್ರ, ಎಲ್ಲ ಮೊಳಕೆಯ ಬೀಜ,
ತನ್ನೊಳಗೆ ತಾನೆ ಮಾಗಿ ಸಿಹಿಯಾದ ಹಣ್ಣು
ಈ ನೆಲದಲ್ಲಿ ಬೇರು ಬಿಟ್ಟು ನಕ್ಷತ್ರದಾಚಿನವರೆಗೂ
ತುಂಬಿಕೊಂಡ ಸವಿ ತಿರುಳು. ನಿನಗಿದೋ ವಂದನೆ.
ನಿನ್ನ ಹೊಣೆ ಯಾರೂ ಹೊರದ, ಯಾರ ಹೊಣೆ ನೀನೂ ಹೊರದ
ಮುಕ್ತ-ಫಲದ ಸಿಪ್ಪೆಯೇ ಅನಂತತೆ,
ಅದರೊಳಗೆ ಕಾರುಣ್ಯದ ರಸ.
ಹಿತವಾಗಿ ಬೆಳಗುವ ಕರುಣೆಯ ಬೆಳಕು,
ಸುತ್ತುವ ಸಾವಿರ ಸೂರ್ಯರಿಗೆ ಇತ್ತು
ಅವರೆಲ್ಲ ಬೆಳಬೆಳಗಿ ಸತ್ತರೂ
ಇನ್ನೂ ಉಳಿದಿರುವುದು
ಬೆಳಗುವುದು ನಿನ್ನಮೂಲ ಕೇಂದ್ರದಲ್ಲಿ.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೂ ನಗೆ ಬೀರಿದಾಗ
Next post ಮಠಮಾರಿತನ

ಸಣ್ಣ ಕತೆ

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

cheap jordans|wholesale air max|wholesale jordans|wholesale jewelry|wholesale jerseys