ದೇವರೆಂದರೇನು ಅಜ್ಜ?

“ದೇವರೆಂದರೇನು ಅಜ್ಜ, ದೇವರೆಂದರೇನು ?
ಹೇಳು ಅವನು ಯಾರು, ಏನು, ತಿಳಿಯಬೇಕು ನಾನೂ”

“ಬಾನು ಬುವಿಯ ಕೈಗೆ ಕೊಟ್ಟ ಬೆಳಕಿನೂರೆಗೋಲು,
ಜೀವ ಎಂದೊ ಕುಡಿದು ಮರೆತ ತಾಯಿಯೆದೆಯ ಹಾಲು,
ಕಲ್ಲು ಮಣ್ಣು ಬಳಸದೇನೆ ಕಟ್ಟಿಕೊಂಡ ಮನೆ.
ಏಸು, ಗಾಂಧಿ ಜೀವಜಲವ ಸುರಿಸಿ ಬೆಳೆದ ತೆನೆ.
ಎಂಥ ಮಾರುಕಟ್ಟೆಯಲ್ಲೂ ಸಿಗದ ಸರಕು ಮಗೂ,
ತಾಯ ಕಣ್ಣ ಬೆಳಕಿನಲ್ಲಿ ಹೊಳೆವ ತಾರೆ ಅದು.

“ದೇವರನ್ನೆ ಹೋಲುವುದು ರಾತ್ರಿ ತೆರೆದ ಬಾನು,
ತಲೆಯನೆತ್ತಿ ನೋಡಿದವರಿಗೆಲ್ಲ ಕಂಡರೂನು
ಮುಟ್ಟಬರದು, ಬೆನ್ನನಟ್ಟಿ ಹೋದರೂನು ಸಿಗದು,
ಇದೆ, ಇಲ್ಲ ಎರಡೂ ನಿಜ ತೆಕ್ಕೆಯೊಳಗೆ ಬರದು.
ಬಿತ್ತದೊಳಗೆ ಮಲಗಿರುವ ವೃಕ್ಷದಂತೆ ಅದು,
ಹೂವಿನೆದೆಯ ಮಾರ್ದವದಲಿ ಹರಿವ ಹಾಗೆ ಮಧು.

“ಎಷ್ಟೇ ಮಳೆ ಸುರಿದೂ ಅದು, ಗಾಳಿಯ ಥರ, ನೆನೆಯದು,
ಗಾಳಿ ಎಷ್ಟೆ ಬೀಸಿದರೂ, ಬೆಳಕಿನ ಥರ, ಅಲುಗದು,
ಮತ್ತೆ ಮತ್ತೆ ಮೊಗೆದರೂ ಕುಳಿ ಬೀಳದ ನೀರು,
ಕತ್ತಲ ಪಡೆ ಸೀಳಿ ನಡೆವ ತಂಬೆಳಕಿನ ತೇರು.
ನಮ್ಮ ಸುತ್ತ ಇದ್ದೂ ಅದು ನಮಗೆ ಸಿಗುವುದಲ್ಲ,
ಸಿಕ್ಕವರಿಗೆ ಕೂಡ ಆದನು ತಿಳಿಸಬರುವುದಿಲ್ಲ.

“ಮುಗಿಲ ರೆಕ್ಕೆ ಮಡಚಿ ಕುಂತ ಕಾಲವೆಂಬ ಹಕ್ಕಿ,
ಗ್ರಹ ತಾರಗಳದಕೆ ತಿನ್ನಲೆರಚಿದಂಥ ಅಕ್ಕಿ.
ಮ್ಮೆತುದಿಗಳೆ ಕಾಣದಂಥ ಮಹದಾಕೃತಿ ಅದು,
ಅಣುವಿನೆದುರ ಬೆಟ್ಟದಂತೆ ನಮ್ಮೆದುರಲಿ ಅದು.
ಹೀಗಿದ್ದೂ ಅದು ಸಣ್ಣನೆ ಕಣಕೂ ಕಿರಿದಂತೆ,
ಕೇಳುವ ನಮ್ಮೊಳಗಿನೊಳಗೆ ಅಣುವಾಗಿದೆಯಂತೆ!

“ದೇವರೆನುವುದೆಲ್ಲಕಿಂತ ತುಂಬ ಸರಳ ಮಗೂ.
ಆದರದನು ತಿಳಿದವರು ತುಂಬ ವಿರಳ ಮಗೂ”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮನೆ
Next post ಎದ್ದು ಬಾರಯ್ಯ ರಂಗ

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

cheap jordans|wholesale air max|wholesale jordans|wholesale jewelry|wholesale jerseys