ನೀರಿರದ ಮೋಡಕ್ಕೆ

ಇಲ್ಲಿದ್ದವರೆ ನೀವು
ಹಿಂದೆ ಒಮ್ಮೆ
ಈಗ ಅಲ್ಲಿದ್ದೀರಿ ದೂರ, ಅಷ್ಟೆ
ಎಲ್ಲೋ ಮೇಲಿದ್ದರೂ,
ಇಲ್ಲದ ಗಾಂಬೀರ್‍ಯ, ಹೊತ್ತು ದಿಕ್ಕಿಂದ ದಿಕ್ಕಿಗೆ
ಒಂದೇ ಸಮನೆ ನೀವು
ಠಳಾಯಿಸುತ್ತಿದ್ದರೂ
ನಿಮ್ಮ ಗುರುತಿದೆ ನಮಗೆ ಖಿಚಿತವಾಗಿ
ಹೇಳಬೇಕೆ ಪೂರ್ವಕಥೆಯನೆಲ್ಲ
ಉಚಿತವಾಗಿ ?

ಇಲ್ಲಿದ್ದಾಗ ನೀವು
ತುಂಬಿಕೊಂಡದ್ದು ಹೇಗೆ, ಎಲ್ಲ ಗೊತ್ತಲ್ಲ !
ಎಲ್ಲ ದಿಕ್ಕಿನಿಂದಲೂ ತೊರೆ ಹಳ್ಳ ಕೊಳ್ಳ
ಕೂಡಿ ಹರಿದವು ಒಂದೆ ಮೈಯಾಗಿ ನಿಮ್ಮೆಡೆಗೆ,
ನೀವಿದ್ದ ತಗ್ಗಿಗೆ.
ಬಂದು ತಲುಪಿದ್ದೆಲ್ಲ ನಿಮ್ಮದೆಂದಾಯಿತು,
ಡೊಡ್ಡ ತಗ್ಗಾಗಿದ್ದೆ ನಿಮಗೆ ವರವಾಯಿತು.

ಸಲ್ಲದ್ದು ಬೇಕಾದಷ್ಟಿತ್ತು ನಿಮ್ಮಲ್ಲಿ
ತುಂಬಿಕೊಂಡಿದ್ದರೂ ದೊಡ್ಡಕಡಲಲ್ಲಿ
ಯಾರಿಗೂ ಹನಿ ನೀರು
ಕೊಡಲಾಗಲಿಲ್ಲ
ನೀವು ಇದ್ದದ್ದೆ ಹಾಗೆ, ಕೊಡುವಂತಿರಲಿಲ್ಲ
ಉಪ್ಪುನೀರನ್ನು ಯಾವ ಬೆಪ್ಪ ಕುಡಿದಾನು ?
ಎಷ್ಟೇ ವಿಶಾಲವಾಗಿ ಕಂಡರೂ ಏನಂತೆ
ಚಿಕ್ಕ ಕೆರೆಗಿಂತಲೂ,
ನಲ್ಲಿಬಾಯಲ್ಲಿ ಬರುವ ಕಿರುಬೆರಳ ದಪ್ಪದ
ಜಲಧಾರೆಗಿಂತಲೂ ಕನಿಷ್ಠವಾಗಿದ್ದಿರಿ,
ಬಾಯಾರಿದವರನೂ ತಣಿಸಲಾಗದ ಹಾಗೆ
ಅನಿಷ್ಟವಾಗಿದ್ದಿರಿ.
ಸುತ್ತ ಮುತ್ತ ಎಲ್ಲ ತುರುಗಿಕೊಂಡಿದ್ದರೂ
ಮುಟ್ಟಲಾಗದ ನಿಮ್ಮ
ಉಪ್ಪು ಬದುಕಿಗೆ ಮರುಗಿ
ಕರಗಿದನು ಭಾನು.
ಪ್ರಖರ ಬಿಸಿಲಿನ ಶಾಖ ಬಿದ್ದು ಮೇಲೆದ್ದಿರಿ ;
ಅದೃಷ್ಟವಿದ್ದುದರಿಂದ
ಗಾಳಿಯ ಬೆನ್ನು ಹತ್ತಿ
ನಿಮ್ಮನ್ನೇ ಬೆಚ್ಚಿಸುವ ಬಾರೀ ಎತ್ತರಕೆ
ಯಾರೂ ಕಾಣದ ಹಾಗೆ
ಹೋಗಿ ಸೇರಿದಿರಿ.
ಈಗ ಹರಡಿದ್ದೀರಿ ಆಗಸದ ತುಂಬ
ಆದರೇನು ?
ಬೆರಗಾಗುವರು ಯಾರು ಸುಳ್ಳು ದಂಭಕ್ಕೆ ?
ನೀರೇ ಇಲ್ಲದ ಖಾಲಿ ಮುಗಿಲ ಠೀವಿಯನು
ಬಯ್ಯುವವರೇ ಎಲ್ಲ – “ಏನೆಂದರೇನೂ ಇಲ್ಲ”

ತೇವವಿಲ್ಲದ ಮುಗಿಲು ನೀಲಿ ಬಾಲಿನ ಮೈಗೆ
ತೊನ್ನು ಎನುವಂತಿದೆ.
ಒಳಗೆ ಜಲವಿಲ್ಲ, ಕೊಡುವ ಬಲವಿಲ್ಲ,
ಕೆಳಗೆ ದಡದಡ ಸುರಿದು
ಮಣ್ಣೊಳಗೆ ಇಳಿದು
ಬೆಳೆವ ಕಸುವಿಲ್ಲ.
ಎಳೆಗಾಳಿ, ತೆಳುಗಾಳಿ ಎಂಥ ಕ್ಷುದ್ರವೆ ಇರಲಿ
ಅದು ಎಳೆದ ದಿಕ್ಕಿಗೇ ಇದರ ಓಟ,
ಆಡಿಸುತ್ತಿದ್ದಾರೆ ಎಲ್ಲ ಆಟ!

ಇಲ್ಲದ್ದು ಹೋಗಿ ಇರುವುದೆಂದು ಬಂದೀತೋ
ಎಂದು ಕೊರಗುತ್ತಿದೆ ಕೆಳಗೆ ಜನವೆಲ್ಲ.
ಜಲಸುರಿವ ಮೋಡಕ್ಕೆ ಕಾಯುತ್ತ ನಿಂತಿವೆ
ಬಾಯ್ತೆರೆದುಕೊಂಡಿರುವ ಹಳ್ಳ ಕೊಳ್ಳ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತೆರಿಗೆ ಮತ್ತು ತೇರು
Next post ನೂರು ನೋವ

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

cheap jordans|wholesale air max|wholesale jordans|wholesale jewelry|wholesale jerseys