ನಾವಿಕರು

|| ನಾವಿಕರಾವಿಹವೆವು ಜೀವಾರ್ಣವದಲ್ಲಿ ತೇಲುತ್ತಿಹೆವು ||

ನಾವು ಜನುಮದ ನಾವೆ ಯೇರ್‍ದೆವು
ಸಾವು ನೋವನು ದೂರಲಿರುವೆವು
ಜೀವಕಕ್ಷರ ಭಾವ ಹೊಳೆಯಲಿ
-ಜಾವ ಜಾವಕೆ ನಾಡನೆನಹಲಿ-

ಅಲ್ಲಿತೆರೆ ಕೊರೆ ಕಲ್ಲು ಸುಳಿಯಿವೆ!
ಇಲ್ಲಿ ಹೂಡಿರಿ! ದೋಣಿಯೆನ್ನುತ
ಎಲ್ಲಸಾಗರ ನಾಭಿಯಲ್ಲಿರೆ!
-ಚಲ್ಪ ಬುದ್ದನ ಗರುಡದೀಪವು-

ನುಡಿದು ನಡೆಯುತ ತೇದು ತೊಳೆಯುತ
ಗಡಿಯ ಬೆಳಗುತ ನಿತ್ಯ ಜೀವನ-
ಉಡಿಗೆ ಯುಡಿಸುತ ತಿನಿಸಿನಲಿವೆಡೆ
-ಒಡನೆ ಯಾಡಲಿ ಗಾಂಧಿರೂಹದು –

ನೋಡಿನಲಿಯಲು-ಹೂಡಿದಣಿಯಲು
ಕೂಡೆಕರೆಯಲು-ಜೋಡಿಗತಿಥಿಯ!
ಕಾಡಿರವಿಠಾ ಕೂರಜಿಹ್ವೆಯು
-ಹಾಡಕಲಿಸಲಿ ನಾಡನೆನಹಿನ-

ನಲವುನೋವಿನ ಉಬ್ಬರಿಳಿತವ
ಗೆಲಿದು ತೇಲಲು ಜೀವಜಲಧಿಯ
ಲಿಳಿದು ಹೊರಟೆವು! ನಾಡನೆನಹಿನೊ
-ಳಳಿವುದುಳಿವುದ ಬಲ್ಲನಾತನು- ನಾವಿಕರಾನಿಹೆವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೩೬
Next post ನವಿಲುಗರಿ – ೯

ಸಣ್ಣ ಕತೆ

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

cheap jordans|wholesale air max|wholesale jordans|wholesale jewelry|wholesale jerseys