ಶ್ರಮ-ಸಂಸ್ಕೃತಿ

ಮಾನವನ ಬೆವರು ಬಾಳಿನ ತವರು
ಅರಿವಾಗಿ ಅರಳಿ ಬೆಳಕಾಯಿತು
ಸಂಸ್ಕೃತಿಗೆ ದುಡಿಮೆ ಬೇರಾಯಿತು ||

ಬಂಡೆಗಟ್ಟಿದ ಬೆಟ್ಟ
ಹಸಿರು ತುಂಬಿದ ಘಟ್ಟ
ಮಾನವನು ಮೈ ಏರಿ ಮಾತಾಡಿದ
ಹೋರಾಟ ನಡೆಸುತ್ತ
ಒಂದಾಗಿ ಬದುಕುತ್ತ
ಹೊಸ ಗೂಡು ಹುಡುಕುತ್ತ ನಡೆದಾಡಿದ ||

ಕಾಡು ಮೇಡಿನ ಹಾಡು
ಕೂಗಿ ಕರೆಯುವ ನಾಡು
ದುಡಿಮೆಗಾರನು ಕೊಟ್ಟ ಹೊಸತು ರೂಪ
ಸಿಡಿಲು ಸಂಚಿನ ಮೋಡ
ಬಿರುಗಾಳಿ ಮಳೆ ನೋಡ
ತಾಳಿದನು ಕೊರೆವ ಚಳಿ ಬಿಸಿಲ ತಾಪ ||

ಧುಮುಕಿದವು ಜಲಪಾತ
ಕೆಣಕಿದವು ಹಿಮಪಾತ
ಜಗ್ಗದೆಯೆ ಹೋರಾಡಿದ
ತಲೆಮಾರು ಕಳೆಯುತ್ತ
ಮನೆ ಮಾರು ಬೆಳೆಯುತ್ತ
ನೋವು ನಲಿವಿನ ನಡುವೆ ಉಸಿರಾಡಿದ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲಗು ಮುದ್ದಿನ ಕಣ್ಮಣಿ
Next post ಬುಗ್ಗೆಗಳು

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

cheap jordans|wholesale air max|wholesale jordans|wholesale jewelry|wholesale jerseys