ಮತ್ತೆ ಹುಟ್ಟುವುದಾದರೆ…

ಮತ್ತೆ ಹುಟ್ಟವುದಾದರೆ
ಈ ನೆಲವೇ ಇರಲಿ
ಹುಟ್ಟಿದ ಮೇಲೆನ್ನ ನುಡಿಯು
ಕನ್ನಡವೇ ಆಗಿರಲಿ

ತುಂಗೆಯಲಿ ನಾನಿರಲು
ಗಂಗೆಯೂ ಬರಲಿ
ಕೃಷ್ಣ-ಗೋದಾವರಿ
ಗೆಳತಿಯರು ಸಿಗಲಿ

ಹಿಮಾಲಯವು ಮುಡಿಯಲ್ಲಿ
ಸಹ್ಯಾದ್ರಿಯು ಅಡಿಯಲ್ಲಿ
ಅಲ್ಲಲ್ಲಿಯೇ ಇರಲಿ
ಕಲ್ಕತ್ತೆಯ ಕಾಳಿ
ಶೃಂಗೇರಿಯ ಶಾರದೆಗೆ
ಹೂವು-ಕುಂಕುಮ ಕೊಡಲಿ
ದೂರದಲ್ಲೇಕೆ ಇರಬೇಕು ದೆಹಲಿ
ಶಿವಮೊಗ್ಗೆಗೇ ಬರಲಿ

ಮತ್ತೆ ಹುಟ್ಟುವುದಾದರೆ
ಈ ನೆಲವೇ ಇರಲಿ
ಮಂಗಳೂರಿನ ಕಡಲು
ಮಡಿಕೇರಿಯ ಮಂಜಿನೊಡಲು
ನನಗೊದಗಿ ಬರಲಿ

ಹಟ್ಟಿ ಚಿನ್ನದ ಬುಗುಡಿ
ಕಾರವಾರದ ಸೀಗಡಿ
ತುಟ್ಟಿಯಾಗದೇ ಇರಲಿ

ಸೊರಗದಿರಲಿ ಬೇಲೂರಿನ ಬಾಲೆ
ಒಣಗದಿರಲಿ ಜೋಗದ ಮೋರೆ
ಇಳಕಲ್ಲಿನ ಸೀರಗೆ
ಕಾಶ್ಮೀರದಲ್ಲೂ ಬೆಲೆ ಸಿಗಲಿ

ಮತ್ತೆ ಹುಟ್ಟುವುದಾದರೆ
ಈ ನೆಲವೇ ಇರಲಿ
ಮೇಲುಕೋಟೆಯ ಚೆಲುವ
ನನಗೊಲಿದು ಬರಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭ್ರಮಣ – ೬
Next post ಶಿಕ್ಷಣ

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

cheap jordans|wholesale air max|wholesale jordans|wholesale jewelry|wholesale jerseys