ಓ ಬೆಟ್ಟ ಬಯಲುಗಳೆ

ಓ ಬೆಟ್ಟ ಬಯಲುಗಳೆ ಕಣಿವೆ ಕಡಲುಗಳೆ
ನಾನು ನಿಮ್ಮ ಕವನ
ಬೇಡ ಧಾವಂತ | ಉಳಿಸಿ ಜೀವಂತ
ಕೊಳ್ಳಿ ನನ್ನ ನಮನ //ಪ//

ಬೆಳಕ ಚೆಲ್ಲಿದ ಬೆಳ್ಳಿ ಸೂರ್ಯನಿಗೆ
ಕತ್ತಲ ಪರದೆಗಳಿಲ್ಲಿ
ತಂಪು ನೀಡುವ ತುಂಬು ಚಂದ್ರನಿಗೆ
ತಾಪದ ಮುತ್ತಿಗೆಯಿಲ್ಲಿ
ಬೀಸಿ ಬರುವ ತಂಗಾಳಿಗೆ ಕೂಡ
ಕಪ್ಪು ಹೊಗೆಯ ಘಾಟು
ಆಮ್ಲಜನಕ ಬೇಕೆನ್ನುವವರಿಗೆ
ಫಿಕ್ಸಾಗಿದೆ ರೇಟು!

ಜಲದ ಕರುಣೆಯ ಭೂಮಿ ತಾಯಿಗೆ
ಬೋರ್‌ವೆಲ್‌ಗಳ ತಿವಿತ
ಚಿನ್ನ ಕೊಟ್ಟರೂ ಕನ್ನ ಹಾಕುವ
ಗಣಿಗಳ್ಳರ ಇರಿತ
ಅನ್ನ ಕೊಡುವ ನೆಲದವ್ವನೊಡಲಿಗೆ
ರಾಸಾಯನಿಕ ವಿಷ
ವಿಷವ ನುಂಗುವ ಮಂದಿ ರಕ್ತ ವಿಷ
ಬದುಕು ಹೇಗೆ ಹರುಷ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೀನಿರುವ ತನಕ
Next post ಮರ್ಯಾದಸ್ಥ ಮನುಷ್ಯರಾಗೋಣ

ಸಣ್ಣ ಕತೆ

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

cheap jordans|wholesale air max|wholesale jordans|wholesale jewelry|wholesale jerseys