ಬೆಳಕನು ಅರಸಿ ಹೊರಟೆ

ಬೆಳಕನು ಅರಸಿ ಹೊರಟೆ ನಾ
ಕತ್ತಲ ಮನೆಯಿಂದ
ಕಂಡಿತು ಕೊನೆಗೂ ಬೆಳಕು ಅಲ್ಲಿ
ಬುದ್ಧನ ಹೆಸರಿಂದ
ಬುದ್ಧನ ಹೆಸರಿಂದ;
ಅರಿವಿನ ಉಸಿರಿಂದ /ಪ//

ದೇವರ ಬಗ್ಗೆ ಒಂದೂ
ಆಡಲಿಲ್ಲ ಮಾತು
ಗಾಳಿಯೊಡನೆ ಗುದ್ದಾಡಿ
ಕೂರಲಿಲ್ಲ ಬೆವೆತು
ನನ್ನ ಕುರಿತು ಮಾತಾಡಿದ;
ಅದರಲ್ಲೆ ಜಗ ತೋರಿದ

ಮೊಲದ ಕೊಂಬನು ಕುರಿತು
ನಡೆಯುತಿಹುದು ಚರ್ಚೆ
ಅದರಲ್ಲೇ ಬಣ ನೂರು
ಕಡೆಗೋ ನನಗೆ ಮೂರ್ಛೆ
ಬುದ್ಧ ಅಲ್ಲಿ ಎಚ್ಚರಿಸಿದ;
ಮೊಲಕೆ ಕೊಂಬು ಉಂಟೆ?
ಮೊಲಕೆ ಕೊಂಬು ಉಂಟೆ??

ಹುಟ್ಟಿದ ಮಾನವನಾಗಿ – ಬುದ್ಧ
ಸತ್ತನು ಮಾನವನಾಗಿ
ಆಡಿದ ಮಾನವನಾಗಿ – ದೀಪ
ಹಚ್ಚಿದ ಮಾನವನಾಗಿ
ಅದಕೆ ಈತ ಮಿಗಿಲು;
ಬುವಿಗೆ ಬೇಕು ಮುಗಿಲು

(ಅಗತ್ಯವಿದ್ದರೆ ಹಾಡುಗಾರಿಕೆಯಲ್ಲಿ ಈ ಕೆಳಗಿನ ಎರಡು ಸಾಲುಗಳನ್ನು ಪಲ್ಲವಿಗೆ ಮೊದಲು ಹಾಡಿಕೊಳ್ಳಬಹುದು –
ಬುದ್ಧ…. ಪ್ರಬುದ್ಧ….
ಬುದ್ಧ…. ಬೆಳಕಿಗೆ ಬದ್ಧ….)
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನು ನಿನ್ನ ಪ್ರೀತಿ
Next post ಆತ್ಮಸಾಕ್ಷಿಯ ಆತ್ಮಹತ್ಯೆ

ಸಣ್ಣ ಕತೆ

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

cheap jordans|wholesale air max|wholesale jordans|wholesale jewelry|wholesale jerseys