ಬುದ್ಧ ಬಂದ ದಾರಿಯಲ್ಲಿ

ಬುದ್ಧ ಬಂದ ದಾರಿಯಲ್ಲಿ ನಾನು ಬಂದೆ
ಬುದ್ಧ ನಿಂದ ದಾರಿಯಲ್ಲಿ ನಾನು ನಿಂದೆ
ಬುದ್ಧ ಕೊನೆಗೆ ಹಿಡಿದ ದಾರಿ ಹಿಡಿಯದಾದೆ
ಅವನು ಕಂಡ ಬೆಳಕ ನಾನು ಕಾಣದಾದೆ //ಪ//

ಬುದ್ಧ ನುಡಿದ ಪ್ರತಿ ಮಾತು ಪಾರದರ್ಶಕ
ಅದಕೆ ವ್ಯಾಖ್ಯಾನ ಗ್ರಂಥ ಅನಾವಶ್ಯಕ
ನನ್ನ ಮೀರಿ ಆಡದ ಆ ಪ್ರತಿ ಮಾತು
ಅದಕೆ ಅವನ ಮೀರಿ ಇಲ್ಲ ಯಾರ ಮಾತು

ಬುದ್ಧ ಮಾತಾಡಿದ ಮಾತೃಭಾಷೆಯಲ್ಲಿ
ಅದಕೆ ನಿಘಂಟಿನ ನೆರವು ಯಾಕೆ ಹೇಳಿ?
ಬಲ್ಲವರೇ ಬಲ್ಲರು ಮಾತೃವಿನ ಹೃದಯ
ಅಲ್ಲಿಯ ಬೆಳವಣಿಗೆಯೆ ಅಲ್ಲವೆ ದಿಗ್ವಿಜಯ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಓ ಗೆಳತಿ ನೀ ಹರೆಯದ ಒಡತಿ
Next post ಸಾಮಾಜಿಕ ಜವಾಬ್ದಾರಿಯ ಪ್ರಶ್ನೆ

ಸಣ್ಣ ಕತೆ

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

cheap jordans|wholesale air max|wholesale jordans|wholesale jewelry|wholesale jerseys