ಲಿಂಗಮ್ಮನ ವಚನಗಳು – ೨೨

ಬೈಲು ಬಯಲಲ್ಲಿ ಒಂದು ಮೃಗವು ಹುಟ್ಟಿತ್ತು.
ಅದ ಕಂಡಹೆನೆಂಬರಿಗೆ ಕಾಣಬಾರದು.
ಹೆಳಿಹೆನೆಂಬರಿಗೆ ಹೇಳಬಾರದು.
ಅದು ಚಿದ್ರೂಪ ಚಿನ್ಮಯವು.
ಅದು ಗೊತ್ತ ಮೆಟ್ಟಿ ಆಡುವದನರಿಯದೆ,
ಕತ್ತಲೆಯಲ್ಲಿ ಮುಳುಗಿ ಕಾಮನ
ಬಾಧೆಗೆ ಶಿಲ್ಕಿ ಎತ್ತಲೆಂದರಿಯದೆ,
ಭವಬಂದನದಲ್ಲಿ ಮುಳುಗಿ
ಕಾಲನ ಬಾಧೆಗೊಳಗಾಗಿ,
ಸತ್ತುಹುಟ್ಟುವ ಮನುಜರ
ಮತ್ತೆ ಶಿವಶರಣರ ಕೂಡಿ,
ತತ್ವವ ಬಲ್ಲೆವೆಂದು, ತರ್ಕಕ್ಕೆ ಬಾಹರು.
ಇದು ಹುಸಿ. ನಮ್ಮ ಶರಣರು ಇದ ಮೆಚ್ಚರು.
ತತ್ವವೆಂಬುದನೆ ಮೆಟ್ಟಿ ಮಿಥ್ಯವ
ನುಡಿವರ ತಮ್ಮ ಪುತ್ರರೆಂದು ಭಾವಿಸಿ,
ಸತ್ತುಹುಟ್ಟುವರ ನೊತ್ತರಿಸಿ,
ನಿಶ್ಚಿಂತದಲ್ಲಿ ನಿಜವ ನೆಮ್ಮಿ
ಬಟ್ಟ ಬಯಲೊಳಗಣ ಮೃಗದ ಗೊತ್ತ ಮೆಟ್ಟಿ,
ಬಚ್ಚ ಬರಿಯ ಬೆಳಗಿನೊಳಗಾಡುವ ಶರಣರ,
ಈ ಸತ್ತು ಮೆಟ್ಟಿ ಹುಳಿಸಿಕೊಂಬ,
ಮಿಥ್ಯವಾದಿಗಳೆತ್ತ ಬಲ್ಲರು ನಿಮ್ಮ ನೆಲೆಯ
ಅಪ್ಪಣಪ್ರಿಯ ಚನ್ನಬಸವಣ್ಣಾ?
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮರ ಮತ್ತು ಹುಲ್ಲೆ
Next post ಜೀವದ ಒಳಗುಟ್ಟು

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

cheap jordans|wholesale air max|wholesale jordans|wholesale jewelry|wholesale jerseys