ನಿನ್ನೆಗೆ ನನ್ನ ಮಾತು

ನೆನಪಿನ ಕಾಡು ಸುತ್ತಲೂ ಹಬ್ಬಿ
ಎತ್ತಲೂ ಸುತ್ತ ರಾಗಗಳು
ವರ್ತಮಾನಕ್ಕೆ ಚಿತ್ರದ ಹಂಗೆ?
ಅವೆಲ್ಲ ಬರಿಯ ಹೃದ್ರೋಗಗಳು
ಸತ್ತ ನಾಗಗಳು – ಪಟ್ಟೆನಾರುಗಳು
ಛಲಕ್ಕೆ ಬಿದ್ದ ಸರ್‍ಪಧ್ವಜನ
ವಿಕಾರ ರೂಪಿನ ಊರುಗಳು

ನಾಳೆ ಇವತ್ತಿಗೆ ಕೊಡುವ ಈ ಅರ್ಥ
ಇವತ್ತು ನಿನ್ನಗೆ ಕೊಟ್ಟಿದ್ದರ್ಂತೇ ವ್ಯರ್ಥವ ?
ಎಂದು ಕಳಕಳಿಸಿ
ಸತ್ತವರ ಕರೆದು
ವರ್ಷಕ್ಕೊಮ್ಮೆಯಾದರೂ ಒಟ್ಟು ನಿಲ್ಲುತ್ತೇನೆ
ರೀತಿ ಬದಲಾದರೂ – ಅಯ್ಯ, ಪ್ರೀತಿಗೆ ವ್ಯವಸ್ಥೆಯೆ ? –
ವಿನ್ಯಾಸಕ್ಕೆ ತಕ್ಕ ನೆರಳು ಬೆರಸಿ
ಅನ್ಯಾಯವಿಲ್ಲ ಎಂದುಕೊಂಡರೂ
ಮನಮನೆಯೊಳಗುರಿವ ಹಗಲು
ಒಂದೇ ಎಂದುಕೊಳ್ಳುತ್ತೇನೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾರದ್ದು ವಿಷ?
Next post ಬಿನ್ನಾಣಗಿತ್ತಿ

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

cheap jordans|wholesale air max|wholesale jordans|wholesale jewelry|wholesale jerseys