ಲಿಂಗಮ್ಮನ ವಚನಗಳು – ೨೮

ಏನೇನು ಇಲ್ಲದಾಗ ನೀವಿಲ್ಲದಿದ್ದರೆ,
ನಾನಾಗಬಲ್ಲೆನೇ ಅಯ್ಯ?
ಆದಿಅನಾದಿ ಇಲ್ಲದಂದು ನೀವಿಲ್ಲದಿದ್ದರೆ,
ನಾನಾಗಬಲ್ಲೆನೇ ಅಯ್ಯ?
ಮುಳುಗಿ ಹೋದವರ ತೆಗೆದುಕೊಂಡು ನಿಮ್ಮ
ತೊತ್ತಿನ ತೊತ್ತಿನ ಪಡಿದೊತ್ತಿನ ಮಗಳೆಂದು,
ರಕ್ಷಣೆಯ ಮಾಡಿದ ಶಿಸುವಾದ ಕಾರಣ
ಹಡಪದಪ್ಪಣ್ಣನೆ ಎನ್ನ ಕರಸ್ಥಲಕ್ಕೆ
ಲಿಂಗವಾಗಿ ಬಂದು ನೆಲೆಗೊಂಡರು.
ಚನ್ನಮಲ್ಲೇಶ್ವರನೆ ಎನ್ನ ಮನಸ್ಥಲಕೆ
ಪ್ರಾಣವಾಗಿ ಮೂರ್ತಗೊಂಡರು
ಆ ಕರಸ್ಥಲದ ಲಿಂಗವನರ್ಚಿಸಿ ಪೂಜಿಸಿ,
ವರವ ಬೇಡಿದರೆ, ತನುವ ತೋರಿದರು.
ಆ ತನುವಿಡಿದು ಮಹಾಘನವ ಕಂಡೆ.
ಆ ಘನವಿಡಿದು ಮನವ ನಿಲಿಸಿದೆ.
ಮನವ ನಿಲಿಸಿ ನೋಡುವನ್ನಕ್ಕ
ಪ್ರಾಣದ ನೆಲೆಯನರಿದೆ.  ಪ್ರಾಣವನೊಂದುಗೂಡಿದೆ.
ಕಾಣಬಾರದ ಕದಳಿಯನೆ ಹೊಕ್ಕು
ನೂನ ಕದಳಿಯ ದಾಂಟಿದೆ.
ಜ್ಞಾನಜ್ಯೋತಿಯ ಕಂಡೆ.
ತಾನುತಾನಾಗಿಪ್ಪ, ಮಹಾಬೆಳೆಗಿನಲ್ಲಿ
ಓಲಾಡಿ ಸುಖಿಯಾದೆನಯ್ಯ
ಚನ್ನಬಸವಣ್ಣನ ಕರುಣದ ಶಿಸುವಾದ ಕಾರಣದಿಂದ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಧಿಕಾರ
Next post ಜಾರಿಹೋದ ಉಂಗುರಕೆ

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

cheap jordans|wholesale air max|wholesale jordans|wholesale jewelry|wholesale jerseys